ಮುಂಬೈ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ ಅಭಿಮಾನಿಗಳನ್ನು ಮೀಟ್ ಮಾಡುತ್ತಾರೆ.
ಅಮಿತಾಭ್ ಅವರ ಸರಳತೆಗೆ ಇತ್ತೀಚೆಗೆ ನಡೆದ ಘಟನೆಯೊಂದು ಉದಾಹರಣೆಯಾಗಿದೆ. ಅದನ್ನು ಸ್ವತಃ ಅಮಿತಾಭ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗೆ ಥ್ಯಾಂಕ್ಸ್ ಹೇಳಿದ್ದಾರೆ.
ಅಮಿತಾಭ್ ಅವರು ಶೂಟಿಂಗ್ ವೊಂದಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್ ನಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ಇದೇ ಘಳಿಗೆಯಲ್ಲಿ ಫ್ಯಾನ್ ವೊಬ್ಬರು ಬೈಕ್ ನಲ್ಲಿ ಅಮಿತಾಭ್ ಅವರನ್ನು ಕೂರಿಸಿಕೊಂಡು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತಲುಪಿಸಿದ್ದಾರೆ.
ಅಭಿಮಾನಿಯ ಬೈಕ್ ಹಿಂಬದಿಯಲ್ಲಿ ಕೂತು ಅಮಿತಾಭ್ ಸವಾರಿ ಮಾಡಿದ್ದಾರೆ. ಅಭಿಮಾನಿಯ ಈ ಸೇವೆಯನ್ನು ಅಮಿತಾಭ್ ಮರೆಯದೇ ಅವರ ಸೇವಾ ಋಣಕ್ಕೆ ಪೋಸ್ಟ್ ವೊಂದನ್ನು ಹಾಕಿ ಬಿಗ್ ಬಿ ಥ್ಯಾಂಕ್ಯೂ ಹೇಳಿದ್ದಾರೆ.
“ಸವಾರಿಗಾಗಿ ಧನ್ಯವಾದಗಳು ಗೆಳಯ ನೀವು ನನಗೆ ಯಾರೆಂದು ಗೊತ್ತಿಲ್ಲ. ಆದರೆ ನೀವು ನನ್ನನ್ನು ಕೆಲಸದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಕರೆದೊಯ್ದಿದ್ದೀರಿ ಥ್ಯಾಂಕ್ಯೂ” ಬರೆದಿದ್ದಾರೆ.
ಸದ್ಯ ಅಭಿಮಾನಿಯೊಂದಿಗೆ ಬೈಕ್ ಸವಾರಿ ಮಾಡಿದ ಅಮಿತಾಭ್ ಅವರ ಫೋಟೋ ವೈರಲ್ ಆಗಿದ್ದು, ಬಿಗ್ ಬಿಯ ಸರಳತೆಯನ್ನು ಜನ ಮೆಚ್ಚಿಕೊಂಡಿದ್ದಾರೆ.
ಅಮಿತಾಭ್ ಬಿಗ್ ಬಜೆಟ್ ʼಪ್ರಾಜೆಕ್ಟ್ ಕೆʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…