ಚಿತ್ರ ಮಂಜರಿ

ಟ್ರಾಫಿಕ್‌ನಲ್ಲಿ ಸಿಲುಕಿದ್ದ ಅಮಿತಾಭ್‌ರನ್ನು ಬೈಕ್‌ ನಲ್ಲಿ ಡ್ರಾಪ್‌ ಕೊಟ್ಟ ಅಭಿಮಾನಿ

ಮುಂಬೈ: ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್‌ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ ಅಭಿಮಾನಿಗಳನ್ನು ಮೀಟ್‌ ಮಾಡುತ್ತಾರೆ.

ಅಮಿತಾಭ್‌ ಅವರ ಸರಳತೆಗೆ ಇತ್ತೀಚೆಗೆ ನಡೆದ ಘಟನೆಯೊಂದು ಉದಾಹರಣೆಯಾಗಿದೆ. ಅದನ್ನು ಸ್ವತಃ ಅಮಿತಾಭ್‌ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗೆ ಥ್ಯಾಂಕ್ಸ್‌ ಹೇಳಿದ್ದಾರೆ.

ಅಮಿತಾಭ್‌ ಅವರು ಶೂಟಿಂಗ್‌ ವೊಂದಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್‌ ನಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ಇದೇ ಘಳಿಗೆಯಲ್ಲಿ ಫ್ಯಾನ್‌ ವೊಬ್ಬರು ಬೈಕ್‌ ನಲ್ಲಿ ಅಮಿತಾಭ್‌ ಅವರನ್ನು ಕೂರಿಸಿಕೊಂಡು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತಲುಪಿಸಿದ್ದಾರೆ.

ಅಭಿಮಾನಿಯ ಬೈಕ್‌ ಹಿಂಬದಿಯಲ್ಲಿ ಕೂತು ಅಮಿತಾಭ್‌ ಸವಾರಿ ಮಾಡಿದ್ದಾರೆ. ಅಭಿಮಾನಿಯ ಈ ಸೇವೆಯನ್ನು ಅಮಿತಾಭ್‌ ಮರೆಯದೇ ಅವರ ಸೇವಾ ಋಣಕ್ಕೆ ಪೋಸ್ಟ್‌ ವೊಂದನ್ನು ಹಾಕಿ ಬಿಗ್‌ ಬಿ ಥ್ಯಾಂಕ್ಯೂ ಹೇಳಿದ್ದಾರೆ.

“ಸವಾರಿಗಾಗಿ ಧನ್ಯವಾದಗಳು ಗೆಳಯ ನೀವು ನನಗೆ ಯಾರೆಂದು ಗೊತ್ತಿಲ್ಲ. ಆದರೆ ನೀವು ನನ್ನನ್ನು ಕೆಲಸದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಕರೆದೊಯ್ದಿದ್ದೀರಿ ಥ್ಯಾಂಕ್ಯೂ” ಬರೆದಿದ್ದಾರೆ.

ಸದ್ಯ ಅಭಿಮಾನಿಯೊಂದಿಗೆ ಬೈಕ್‌ ಸವಾರಿ ಮಾಡಿದ ಅಮಿತಾಭ್‌ ಅವರ ಫೋಟೋ ವೈರಲ್‌ ಆಗಿದ್ದು, ಬಿಗ್‌ ಬಿಯ ಸರಳತೆಯನ್ನು ಜನ ಮೆಚ್ಚಿಕೊಂಡಿದ್ದಾರೆ.

ಅಮಿತಾಭ್‌ ಬಿಗ್‌ ಬಜೆಟ್‌ ʼಪ್ರಾಜೆಕ್ಟ್‌ ಕೆʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago