ಚಿತ್ರ ಮಂಜರಿ

ಟ್ರಾಫಿಕ್‌ನಲ್ಲಿ ಸಿಲುಕಿದ್ದ ಅಮಿತಾಭ್‌ರನ್ನು ಬೈಕ್‌ ನಲ್ಲಿ ಡ್ರಾಪ್‌ ಕೊಟ್ಟ ಅಭಿಮಾನಿ

ಮುಂಬೈ: ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್‌ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ ಅಭಿಮಾನಿಗಳನ್ನು ಮೀಟ್‌ ಮಾಡುತ್ತಾರೆ.

ಅಮಿತಾಭ್‌ ಅವರ ಸರಳತೆಗೆ ಇತ್ತೀಚೆಗೆ ನಡೆದ ಘಟನೆಯೊಂದು ಉದಾಹರಣೆಯಾಗಿದೆ. ಅದನ್ನು ಸ್ವತಃ ಅಮಿತಾಭ್‌ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗೆ ಥ್ಯಾಂಕ್ಸ್‌ ಹೇಳಿದ್ದಾರೆ.

ಅಮಿತಾಭ್‌ ಅವರು ಶೂಟಿಂಗ್‌ ವೊಂದಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್‌ ನಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ಇದೇ ಘಳಿಗೆಯಲ್ಲಿ ಫ್ಯಾನ್‌ ವೊಬ್ಬರು ಬೈಕ್‌ ನಲ್ಲಿ ಅಮಿತಾಭ್‌ ಅವರನ್ನು ಕೂರಿಸಿಕೊಂಡು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತಲುಪಿಸಿದ್ದಾರೆ.

ಅಭಿಮಾನಿಯ ಬೈಕ್‌ ಹಿಂಬದಿಯಲ್ಲಿ ಕೂತು ಅಮಿತಾಭ್‌ ಸವಾರಿ ಮಾಡಿದ್ದಾರೆ. ಅಭಿಮಾನಿಯ ಈ ಸೇವೆಯನ್ನು ಅಮಿತಾಭ್‌ ಮರೆಯದೇ ಅವರ ಸೇವಾ ಋಣಕ್ಕೆ ಪೋಸ್ಟ್‌ ವೊಂದನ್ನು ಹಾಕಿ ಬಿಗ್‌ ಬಿ ಥ್ಯಾಂಕ್ಯೂ ಹೇಳಿದ್ದಾರೆ.

“ಸವಾರಿಗಾಗಿ ಧನ್ಯವಾದಗಳು ಗೆಳಯ ನೀವು ನನಗೆ ಯಾರೆಂದು ಗೊತ್ತಿಲ್ಲ. ಆದರೆ ನೀವು ನನ್ನನ್ನು ಕೆಲಸದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಕರೆದೊಯ್ದಿದ್ದೀರಿ ಥ್ಯಾಂಕ್ಯೂ” ಬರೆದಿದ್ದಾರೆ.

ಸದ್ಯ ಅಭಿಮಾನಿಯೊಂದಿಗೆ ಬೈಕ್‌ ಸವಾರಿ ಮಾಡಿದ ಅಮಿತಾಭ್‌ ಅವರ ಫೋಟೋ ವೈರಲ್‌ ಆಗಿದ್ದು, ಬಿಗ್‌ ಬಿಯ ಸರಳತೆಯನ್ನು ಜನ ಮೆಚ್ಚಿಕೊಂಡಿದ್ದಾರೆ.

ಅಮಿತಾಭ್‌ ಬಿಗ್‌ ಬಜೆಟ್‌ ʼಪ್ರಾಜೆಕ್ಟ್‌ ಕೆʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

andolanait

Recent Posts

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

56 mins ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

1 hour ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

2 hours ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

3 hours ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

3 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

3 hours ago