ಚಿತ್ರ ಮಂಜರಿ

ಅಮೆರಿಕ: ಮನೆಯ ಮುಂದೆ ಬಚ್ಚನ್‌ ಪ್ರತಿಮೆಯನ್ನು ಅನಾವರಣಗೊಳಿಸಿದ ಅಭಿಮಾನಿ

ಅಮಿತಾಭ್ ಬಚ್ಚನ್  ಅವರು ಚಿತ್ರರಂಗದಲ್ಲಿ ಹಲವು ದಶಕಗಳನ್ನು ಕಳೆದಿದ್ದಾರೆ. ಅನೇಕ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರು ವೃತ್ತಿ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. ಈ ಸಂದರ್ಭದಲ್ಲಿ ಫ್ಯಾನ್ಸ್ ಸದಾ ಅವರ ಜತೆಗೆ ಇದ್ದರು. ಅವರ ಮೇಲಿರುವ ಪ್ರೀತಿಯನ್ನು ಫ್ಯಾನ್ಸ್ ನಾನಾ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ಈಗ ಅಮೆರಿಕದಲ್ಲಿ ವಾಸವಾಗಿರುವ ಭಾರತ ಮೂಲದ ವ್ಯಕ್ತಿ ಅಮಿತಾಭ್ ಮೇಲಿರುವ ಪ್ರೀತಿಯನ್ನು ಭಿನ್ನ ರೀತಿಯಲ್ಲಿ ತೋರಿದ್ದಾರೆ.

ಅಮಿತಾಭ್ ಬಚ್ಚನ್ ಅವರ ಅಭಿಮಾನಿ ಗೋಪಿ ಅವರು ಹಲವು ವರ್ಷಗಳ ಹಿಂದೆ ಅಮೆರಿಕದ ನ್ಯೂ ಜೆರ್ಸಿಗೆ ತೆರಳಿ ಅಲ್ಲಿಯೇ ವಾಸವಾಗಿದ್ದಾರೆ. ಅಲ್ಲಿ ಹೊಸ ಮನೆ ಕಟ್ಟಿದ್ದಾರೆ. ಈ ಮನೆಯ ಎದುರು ಅವರು ಅಮಿತಾಭ್ ಬಚ್ಚನ್ ಅವರ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಈ ಫೋಟೋಗಳನ್ನು ಗೋಪಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಶನಿವಾರ, ಆಗಸ್ಟ್ 27ರಂದು ಅಮಿತಾಭ್ ಬಚ್ಚನ್ ಅವರ ಪ್ರತಿಮೆಯನ್ನು ಮನೆಯ ಎದುರು ನಿರ್ಮಾಣ ಮಾಡಿದ್ದೇವೆ. ಅಮಿತಾಭ್ ಪ್ರತಿಮೆ ಅನಾವರಣಕ್ಕೆ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು’ ಎಂದು ಗೋಪಿ ಬರೆದುಕೊಂಡಿದ್ದಾರೆ.

‘ಅಮಿತಾಭ್ ಅವರು ನನಗೆ ಮತ್ತು ನನ್ನ ಪತ್ನಿಗೆ ದೇವರಿಗಿಂತ ಹೆಚ್ಚು. ಅವರ ಎಲ್ಲ ವಿಚಾರಗಳು ನನಗೆ ಸ್ಫೂರ್ತಿದಾಯಕ. ಅವರು ತುಂಬಾ ಸರಳ ವ್ಯಕ್ತಿ. ಅವರು ಇತರ ಸ್ಟಾರ್​ಗಳ ರೀತಿ ಅಲ್ಲ. ಈ ಕಾರಣಕ್ಕೆ ನಮ್ಮ ಮನೆ ಎದುರು ಅವರ ಪ್ರತಿಮೆ ನಿರ್ಮಿಸಲು ನಿರ್ಧರಿಸಿದೆ’ ಎಂದು ಪಿಟಿಐಗೆ ಗೋಪಿ ಮಾಹಿತಿ ನೀಡಿದ್ದಾರೆ.

andolana

Recent Posts

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

49 mins ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

5 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

5 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

5 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

5 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

5 hours ago