ಚಿತ್ರ ಮಂಜರಿ

ಸೂಪರ್‌ ಸ್ಟಾರ್‌ ರಜನಿಕಾಂತ್ ನಟನೆಯ ಜೈಲರ್‌ ಚಿತ್ರ ವೀಕ್ಷಿಸಲು ಚೆನ್ನೈಗೆ ಆಗಮಿಸಿದ ಜಪಾನ್‌ ದಂಪತಿ!

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ಚಿತ್ರ ‘ಜೈಲರ್’ ಕ್ರೇಜ್ ಯಾವ ಮಟ್ಟಿಗೆ ಇದೆ ಎಂದರೆ ಜಪಾನಿನ ದಂಪತಿ ಚಿತ್ರ ವೀಕ್ಷಣೆಗಾಗಿ ಚೆನ್ನೈಗೆ ಆಗಮಿಸಿದ್ದಾರೆ. ಯಸುದಾ ಎಂದು ಗುರುತಿಸಲಾದ ವ್ಯಕ್ತಿ ರಜನಿಕಾಂತ್ ಅವರ ಅಭಿಮಾನಿ ಎನ್ನಲಾಗಿದ್ದು,  ಅವರು ತಮ್ಮ ಅಭಿಮಾನಿಗಳೊಂದಿಗೆ ರಜನಿ ಚಿತ್ರ ವೀಕ್ಷಿಸಲು ತಮ್ಮ ಪತ್ನಿಯೊಂದಿಗೆ ಚೆನ್ನೈಗೆ ಬಂದಿದ್ದಾರೆ.

ದಂಪತಿಯ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ರಜನಿಕಾಂತ್  ಚಿತ್ರವಿರುವ ಬಿಳಿ ಟೀ ಶರ್ಟ್‌ಗಳನ್ನು ಧರಿಸಿರುವುದನ್ನು ಕಾಣಬಹುದು. ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯಸುದಾ, ‘ಜೈಲರ್’ ಚಿತ್ರದ ಮೊದಲ ದಿನದ ಮೊದಲ ಪ್ರದರ್ಶನ  ವೀಕ್ಷಿಸಲು ಜಪಾನ್‌ನಿಂದ ಚೆನ್ನೈಗೆ ಬಂದಿದ್ದೇವೆ.  ನಮ್ಮ ತಲೈವಾ ಚಿತ್ರ ನೋಡಿ ಇಷ್ಟಪಟ್ಟಿರುವುದಾಗಿ ತಿಳಿಸಿದರು. ಅವರು ರಜನಿಕಾಂತ್ ಚಿತ್ರದ ಸಂಭಾಷಣೆಯನ್ನು ತಮಿಳು ಭಾಷೆಯಲ್ಲಿಯೇ ಹೇಳುತ್ತಿದ್ದರು.

ಇನ್ನೂ ಜೈಲರ್ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು,  ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಆಚರಿಸುತ್ತಿರುವುದು ಕಂಡುಬಂದಿತ್ತು. ‘ಕಬಾಲಿ’ ನಟನ ಪೋಸ್ಟರ್‌ಗೆ ಹಲವು ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ಜಾಕಿ ಶ್ರಾಫ್ 36 ವರ್ಷಗಳ ನಂತರ ರಜನಿಕಾಂತ್ ಅವರೊಂದಿಗೆ  ತೆರೆ ಹಂಚಿಕೊಂಡಿದ್ದಾರೆ. ‘ಜೈಲರ್’ ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಹೇಳಲಾಗಿದೆ ಮತ್ತು ಪ್ರಿಯಾಂಕಾ ಮೋಹನ್, ಡಾ. ಶಿವರಾಜ್ ಕುಮಾರ್,  ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್ ಮತ್ತಿತರ ತಾರಾಬಳಗವನ್ನು ಹೊಂದಿದೆ. ಮಲಯಾಳಂ ನಟ ಮೋಹನ್ ಲಾಲ್ ಕೂಡಾ ಅತಿಥಿ ಪಾತ್ರದಲ್ಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago