ಚಿತ್ರ ಮಂಜರಿ

ಸೂಪರ್‌ ಸ್ಟಾರ್‌ ರಜನಿಕಾಂತ್ ನಟನೆಯ ಜೈಲರ್‌ ಚಿತ್ರ ವೀಕ್ಷಿಸಲು ಚೆನ್ನೈಗೆ ಆಗಮಿಸಿದ ಜಪಾನ್‌ ದಂಪತಿ!

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ಚಿತ್ರ ‘ಜೈಲರ್’ ಕ್ರೇಜ್ ಯಾವ ಮಟ್ಟಿಗೆ ಇದೆ ಎಂದರೆ ಜಪಾನಿನ ದಂಪತಿ ಚಿತ್ರ ವೀಕ್ಷಣೆಗಾಗಿ ಚೆನ್ನೈಗೆ ಆಗಮಿಸಿದ್ದಾರೆ. ಯಸುದಾ ಎಂದು ಗುರುತಿಸಲಾದ ವ್ಯಕ್ತಿ ರಜನಿಕಾಂತ್ ಅವರ ಅಭಿಮಾನಿ ಎನ್ನಲಾಗಿದ್ದು,  ಅವರು ತಮ್ಮ ಅಭಿಮಾನಿಗಳೊಂದಿಗೆ ರಜನಿ ಚಿತ್ರ ವೀಕ್ಷಿಸಲು ತಮ್ಮ ಪತ್ನಿಯೊಂದಿಗೆ ಚೆನ್ನೈಗೆ ಬಂದಿದ್ದಾರೆ.

ದಂಪತಿಯ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ರಜನಿಕಾಂತ್  ಚಿತ್ರವಿರುವ ಬಿಳಿ ಟೀ ಶರ್ಟ್‌ಗಳನ್ನು ಧರಿಸಿರುವುದನ್ನು ಕಾಣಬಹುದು. ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯಸುದಾ, ‘ಜೈಲರ್’ ಚಿತ್ರದ ಮೊದಲ ದಿನದ ಮೊದಲ ಪ್ರದರ್ಶನ  ವೀಕ್ಷಿಸಲು ಜಪಾನ್‌ನಿಂದ ಚೆನ್ನೈಗೆ ಬಂದಿದ್ದೇವೆ.  ನಮ್ಮ ತಲೈವಾ ಚಿತ್ರ ನೋಡಿ ಇಷ್ಟಪಟ್ಟಿರುವುದಾಗಿ ತಿಳಿಸಿದರು. ಅವರು ರಜನಿಕಾಂತ್ ಚಿತ್ರದ ಸಂಭಾಷಣೆಯನ್ನು ತಮಿಳು ಭಾಷೆಯಲ್ಲಿಯೇ ಹೇಳುತ್ತಿದ್ದರು.

ಇನ್ನೂ ಜೈಲರ್ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು,  ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಆಚರಿಸುತ್ತಿರುವುದು ಕಂಡುಬಂದಿತ್ತು. ‘ಕಬಾಲಿ’ ನಟನ ಪೋಸ್ಟರ್‌ಗೆ ಹಲವು ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ಜಾಕಿ ಶ್ರಾಫ್ 36 ವರ್ಷಗಳ ನಂತರ ರಜನಿಕಾಂತ್ ಅವರೊಂದಿಗೆ  ತೆರೆ ಹಂಚಿಕೊಂಡಿದ್ದಾರೆ. ‘ಜೈಲರ್’ ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಹೇಳಲಾಗಿದೆ ಮತ್ತು ಪ್ರಿಯಾಂಕಾ ಮೋಹನ್, ಡಾ. ಶಿವರಾಜ್ ಕುಮಾರ್,  ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್ ಮತ್ತಿತರ ತಾರಾಬಳಗವನ್ನು ಹೊಂದಿದೆ. ಮಲಯಾಳಂ ನಟ ಮೋಹನ್ ಲಾಲ್ ಕೂಡಾ ಅತಿಥಿ ಪಾತ್ರದಲ್ಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

7 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

13 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago