ಚಿತ್ರ ಮಂಜರಿ

ಸೂಪರ್‌ ಸ್ಟಾರ್‌ ರಜನಿಕಾಂತ್ ನಟನೆಯ ಜೈಲರ್‌ ಚಿತ್ರ ವೀಕ್ಷಿಸಲು ಚೆನ್ನೈಗೆ ಆಗಮಿಸಿದ ಜಪಾನ್‌ ದಂಪತಿ!

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ಚಿತ್ರ ‘ಜೈಲರ್’ ಕ್ರೇಜ್ ಯಾವ ಮಟ್ಟಿಗೆ ಇದೆ ಎಂದರೆ ಜಪಾನಿನ ದಂಪತಿ ಚಿತ್ರ ವೀಕ್ಷಣೆಗಾಗಿ ಚೆನ್ನೈಗೆ ಆಗಮಿಸಿದ್ದಾರೆ. ಯಸುದಾ ಎಂದು ಗುರುತಿಸಲಾದ ವ್ಯಕ್ತಿ ರಜನಿಕಾಂತ್ ಅವರ ಅಭಿಮಾನಿ ಎನ್ನಲಾಗಿದ್ದು,  ಅವರು ತಮ್ಮ ಅಭಿಮಾನಿಗಳೊಂದಿಗೆ ರಜನಿ ಚಿತ್ರ ವೀಕ್ಷಿಸಲು ತಮ್ಮ ಪತ್ನಿಯೊಂದಿಗೆ ಚೆನ್ನೈಗೆ ಬಂದಿದ್ದಾರೆ.

ದಂಪತಿಯ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ರಜನಿಕಾಂತ್  ಚಿತ್ರವಿರುವ ಬಿಳಿ ಟೀ ಶರ್ಟ್‌ಗಳನ್ನು ಧರಿಸಿರುವುದನ್ನು ಕಾಣಬಹುದು. ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯಸುದಾ, ‘ಜೈಲರ್’ ಚಿತ್ರದ ಮೊದಲ ದಿನದ ಮೊದಲ ಪ್ರದರ್ಶನ  ವೀಕ್ಷಿಸಲು ಜಪಾನ್‌ನಿಂದ ಚೆನ್ನೈಗೆ ಬಂದಿದ್ದೇವೆ.  ನಮ್ಮ ತಲೈವಾ ಚಿತ್ರ ನೋಡಿ ಇಷ್ಟಪಟ್ಟಿರುವುದಾಗಿ ತಿಳಿಸಿದರು. ಅವರು ರಜನಿಕಾಂತ್ ಚಿತ್ರದ ಸಂಭಾಷಣೆಯನ್ನು ತಮಿಳು ಭಾಷೆಯಲ್ಲಿಯೇ ಹೇಳುತ್ತಿದ್ದರು.

ಇನ್ನೂ ಜೈಲರ್ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು,  ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಆಚರಿಸುತ್ತಿರುವುದು ಕಂಡುಬಂದಿತ್ತು. ‘ಕಬಾಲಿ’ ನಟನ ಪೋಸ್ಟರ್‌ಗೆ ಹಲವು ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ಜಾಕಿ ಶ್ರಾಫ್ 36 ವರ್ಷಗಳ ನಂತರ ರಜನಿಕಾಂತ್ ಅವರೊಂದಿಗೆ  ತೆರೆ ಹಂಚಿಕೊಂಡಿದ್ದಾರೆ. ‘ಜೈಲರ್’ ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಹೇಳಲಾಗಿದೆ ಮತ್ತು ಪ್ರಿಯಾಂಕಾ ಮೋಹನ್, ಡಾ. ಶಿವರಾಜ್ ಕುಮಾರ್,  ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್ ಮತ್ತಿತರ ತಾರಾಬಳಗವನ್ನು ಹೊಂದಿದೆ. ಮಲಯಾಳಂ ನಟ ಮೋಹನ್ ಲಾಲ್ ಕೂಡಾ ಅತಿಥಿ ಪಾತ್ರದಲ್ಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

8 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

33 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

52 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago