ಚಿತ್ರ ಮಂಜರಿ

ಸೂಪರ್‌ ಸ್ಟಾರ್‌ ರಜನಿಕಾಂತ್ ನಟನೆಯ ಜೈಲರ್‌ ಚಿತ್ರ ವೀಕ್ಷಿಸಲು ಚೆನ್ನೈಗೆ ಆಗಮಿಸಿದ ಜಪಾನ್‌ ದಂಪತಿ!

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ಚಿತ್ರ ‘ಜೈಲರ್’ ಕ್ರೇಜ್ ಯಾವ ಮಟ್ಟಿಗೆ ಇದೆ ಎಂದರೆ ಜಪಾನಿನ ದಂಪತಿ ಚಿತ್ರ ವೀಕ್ಷಣೆಗಾಗಿ ಚೆನ್ನೈಗೆ ಆಗಮಿಸಿದ್ದಾರೆ. ಯಸುದಾ ಎಂದು ಗುರುತಿಸಲಾದ ವ್ಯಕ್ತಿ ರಜನಿಕಾಂತ್ ಅವರ ಅಭಿಮಾನಿ ಎನ್ನಲಾಗಿದ್ದು,  ಅವರು ತಮ್ಮ ಅಭಿಮಾನಿಗಳೊಂದಿಗೆ ರಜನಿ ಚಿತ್ರ ವೀಕ್ಷಿಸಲು ತಮ್ಮ ಪತ್ನಿಯೊಂದಿಗೆ ಚೆನ್ನೈಗೆ ಬಂದಿದ್ದಾರೆ.

ದಂಪತಿಯ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ರಜನಿಕಾಂತ್  ಚಿತ್ರವಿರುವ ಬಿಳಿ ಟೀ ಶರ್ಟ್‌ಗಳನ್ನು ಧರಿಸಿರುವುದನ್ನು ಕಾಣಬಹುದು. ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯಸುದಾ, ‘ಜೈಲರ್’ ಚಿತ್ರದ ಮೊದಲ ದಿನದ ಮೊದಲ ಪ್ರದರ್ಶನ  ವೀಕ್ಷಿಸಲು ಜಪಾನ್‌ನಿಂದ ಚೆನ್ನೈಗೆ ಬಂದಿದ್ದೇವೆ.  ನಮ್ಮ ತಲೈವಾ ಚಿತ್ರ ನೋಡಿ ಇಷ್ಟಪಟ್ಟಿರುವುದಾಗಿ ತಿಳಿಸಿದರು. ಅವರು ರಜನಿಕಾಂತ್ ಚಿತ್ರದ ಸಂಭಾಷಣೆಯನ್ನು ತಮಿಳು ಭಾಷೆಯಲ್ಲಿಯೇ ಹೇಳುತ್ತಿದ್ದರು.

ಇನ್ನೂ ಜೈಲರ್ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು,  ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಆಚರಿಸುತ್ತಿರುವುದು ಕಂಡುಬಂದಿತ್ತು. ‘ಕಬಾಲಿ’ ನಟನ ಪೋಸ್ಟರ್‌ಗೆ ಹಲವು ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ಜಾಕಿ ಶ್ರಾಫ್ 36 ವರ್ಷಗಳ ನಂತರ ರಜನಿಕಾಂತ್ ಅವರೊಂದಿಗೆ  ತೆರೆ ಹಂಚಿಕೊಂಡಿದ್ದಾರೆ. ‘ಜೈಲರ್’ ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಹೇಳಲಾಗಿದೆ ಮತ್ತು ಪ್ರಿಯಾಂಕಾ ಮೋಹನ್, ಡಾ. ಶಿವರಾಜ್ ಕುಮಾರ್,  ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್ ಮತ್ತಿತರ ತಾರಾಬಳಗವನ್ನು ಹೊಂದಿದೆ. ಮಲಯಾಳಂ ನಟ ಮೋಹನ್ ಲಾಲ್ ಕೂಡಾ ಅತಿಥಿ ಪಾತ್ರದಲ್ಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago