ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು.
ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
https://www.facebook.com/watch/?v=868741608153627
ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.
‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.
ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…