ಚಿತ್ರ ಮಂಜರಿ

ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ

ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು.

ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

https://www.facebook.com/watch/?v=868741608153627

ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್​ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.

ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago