ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು.
ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
https://www.facebook.com/watch/?v=868741608153627
ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.
‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.
ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…