ದೊಡ್ಮನೆ ಕುಡಿ ಯುವ ರಾಜ್ಕುಮಾರ್ ಅಭಿನಯದ ಮೊದಲ ಚಿತ್ರ “ಯುವ” ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್ಗೆ ಮುಂದೂಡಲ್ಪಟ್ಟಿತ್ತು.
ಹೌದು, ಇದೇ ಡಿಸೆಂಬರ್ 22 ಕ್ಕೆ ಯುವ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಗೆಯಾಗಬೇಕಿತ್ತು. ಚಿಕ್ಕಪ್ಪ ಪುನೀತ್ ರಾಜ್ಕುಮಾರ್ ಹುಟ್ಟಿದ ತಿಂಗಳು ಯುವ ಬೆಳ್ಳಿತೆರೆಗೆ ಅಪ್ಪಳಿಸಲಿದ್ದು ಚಿತ್ರತಂಡ ಇದೀಗ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದು ಕುಂಬಳಕಾಯಿ ಹೊಡೆದಿದೆ. ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿರುವ ಕುರಿತ ಫೋಟೊವನ್ನು ಚಿತ್ರತಂಡ ಹಂಚಿಕೊಂಡಿದ್ದು, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿಬಂದಿರುವ ಯುವ ಸಿನಿಮಾಕ್ಕೆ ನಿರ್ಮಾಪಕ ವಿಜಯ್ ಕಿರಗಂದುರ್ ಬಂಡವಾಳ ಹೂಡಿದ್ದಾರೆ. ಯುವ ಮೂಲಕ ಅಣ್ಣಾವ್ರ ಮೊಮ್ಮಗ ಯುವರಾಜ್ ಕುಮಾರ್ ಮೊಟ್ಟ ಮೊದಲಬಾರಿಗೆ ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಯುವಗೆ ಜೊತೆಯಾಗಿ ಕಾಂತಾರ ಬೆಡಗಿ, ಮೂಗುತ್ತಿ ಸುಂದರಿ ಸಪ್ತಮಿ ಗೌಡ ಹೆಜ್ಜೆ ಹಾಕಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…