ದೊಡ್ಮನೆ ಕುಡಿ ಯುವ ರಾಜ್ಕುಮಾರ್ ಅಭಿನಯದ ಮೊದಲ ಚಿತ್ರ “ಯುವ” ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್ಗೆ ಮುಂದೂಡಲ್ಪಟ್ಟಿತ್ತು.
ಹೌದು, ಇದೇ ಡಿಸೆಂಬರ್ 22 ಕ್ಕೆ ಯುವ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಗೆಯಾಗಬೇಕಿತ್ತು. ಚಿಕ್ಕಪ್ಪ ಪುನೀತ್ ರಾಜ್ಕುಮಾರ್ ಹುಟ್ಟಿದ ತಿಂಗಳು ಯುವ ಬೆಳ್ಳಿತೆರೆಗೆ ಅಪ್ಪಳಿಸಲಿದ್ದು ಚಿತ್ರತಂಡ ಇದೀಗ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದು ಕುಂಬಳಕಾಯಿ ಹೊಡೆದಿದೆ. ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿರುವ ಕುರಿತ ಫೋಟೊವನ್ನು ಚಿತ್ರತಂಡ ಹಂಚಿಕೊಂಡಿದ್ದು, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿಬಂದಿರುವ ಯುವ ಸಿನಿಮಾಕ್ಕೆ ನಿರ್ಮಾಪಕ ವಿಜಯ್ ಕಿರಗಂದುರ್ ಬಂಡವಾಳ ಹೂಡಿದ್ದಾರೆ. ಯುವ ಮೂಲಕ ಅಣ್ಣಾವ್ರ ಮೊಮ್ಮಗ ಯುವರಾಜ್ ಕುಮಾರ್ ಮೊಟ್ಟ ಮೊದಲಬಾರಿಗೆ ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಯುವಗೆ ಜೊತೆಯಾಗಿ ಕಾಂತಾರ ಬೆಡಗಿ, ಮೂಗುತ್ತಿ ಸುಂದರಿ ಸಪ್ತಮಿ ಗೌಡ ಹೆಜ್ಜೆ ಹಾಕಿದ್ದಾರೆ.
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…