ಚಿತ್ರ ಮಂಜರಿ

ಚಿತ್ರೀಕರಣ ಮುಗಿಸಿದ ಯುವ ಚಿತ್ರತಂಡ

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಮೊದಲ ಚಿತ್ರ “ಯುವ” ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್‌ಗೆ ಮುಂದೂಡಲ್ಪಟ್ಟಿತ್ತು.

ಹೌದು, ಇದೇ ಡಿಸೆಂಬರ್‌ 22 ಕ್ಕೆ ಯುವ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಗೆಯಾಗಬೇಕಿತ್ತು. ಚಿಕ್ಕಪ್ಪ ಪುನೀತ್‌ ರಾಜ್‌ಕುಮಾರ್‌ ಹುಟ್ಟಿದ ತಿಂಗಳು ಯುವ ಬೆಳ್ಳಿತೆರೆಗೆ ಅಪ್ಪಳಿಸಲಿದ್ದು ಚಿತ್ರತಂಡ ಇದೀಗ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದು ಕುಂಬಳಕಾಯಿ ಹೊಡೆದಿದೆ. ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿರುವ ಕುರಿತ ಫೋಟೊವನ್ನು ಚಿತ್ರತಂಡ ಹಂಚಿಕೊಂಡಿದ್ದು, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಸಂತೋಷ್‌ ಆನಂದ್ ರಾಮ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಯುವ ಸಿನಿಮಾಕ್ಕೆ ನಿರ್ಮಾಪಕ ವಿಜಯ್‌ ಕಿರಗಂದುರ್ ಬಂಡವಾಳ ಹೂಡಿದ್ದಾರೆ. ಯುವ ಮೂಲಕ ಅಣ್ಣಾವ್ರ ಮೊಮ್ಮಗ ಯುವರಾಜ್‌ ಕುಮಾರ್‌ ಮೊಟ್ಟ ಮೊದಲಬಾರಿಗೆ ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಯುವಗೆ ಜೊತೆಯಾಗಿ ಕಾಂತಾರ ಬೆಡಗಿ, ಮೂಗುತ್ತಿ ಸುಂದರಿ ಸಪ್ತಮಿ ಗೌಡ ಹೆಜ್ಜೆ ಹಾಕಿದ್ದಾರೆ.

 

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

11 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

12 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago