ಚಿತ್ರ ಮಂಜರಿ

ಹಿಂದೂ ಸಂಪ್ರದಾಯದಂತೆ ಪೂಜೆ ಸಲ್ಲಿಸಿದ ಅಮೀರ್‌ ಖಾನ್‌

ನಟ ಆಮಿರ್​ ಖಾನ್ ಅವರು ಬಾಲಿವುಡ್​ನಲ್ಲಿ ಮಿಸ್ಟರ್​ ಪರ್ಫೆಕ್ಟ್​ ಎಂದೇ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಬಿಡುಗಡೆಯಾದ ‘ಲಾಲ್​ ಸಿಂಗ್​ ಛಡ್ಡಾ’ ಚಿತ್ರ ಮಾತ್ರ ಹೀನಾಯ ಸೋಲು ಕಂಡಿತು. ಈ ಚಿತ್ರದ ಸೋಲಿಗೆ ನಟ ಆಮಿರ್​ ಖಾನ್​ ಅವರು ಸಾಮಾಜಿಕವಾಗಿ ನೀಡಿದ ಕೆಲ ವಿವಾದಾತ್ಮಕ ಹೇಳಿಕೆಗಳು ಕಾರಣ ಎನ್ನಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಹಿಂದೂ ವಿರೋಧಿ ಎಂದು ಕೂಡ ಆಮಿರ್​ ಖಾನ್​ ಟೀಕಿಗೆ ಒಳಗಾಗಿದ್ದು ಇದೆ. ಆದರೆ ಸದ್ಯ ಹಿಂದೂ ಸಂಪ್ರದಾಯದಂತೆ ಆಮಿರ್​ ಖಾನ್ ಮತ್ತು ಮಾಜಿ ಪತ್ನಿ ಕಿರಣ್ ರಾವ್​ ಪೂಜೆ ಮಾಡಿರುವ ಫೋಟೋಗಳು ವೈರಲ್​ ಆಗಿವೆ.

ನಟ ಆಮಿರ್​ ಖಾನ್ ಇತ್ತೀಚೆಗೆ ತಮ್ಮ ಪ್ರೊಡಕ್ಷನ್​ ಸಂಸ್ಥೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದ್ದಾರೆ. ಆಮಿರ್​ ಖಾನ್​ ಪೂಜೆ ಮಾಡುತ್ತಿರುವ ಫೋಟೋಗಳನ್ನು ‘ಲಾಲ್ ಸಿಂಗ್​ ಛಡ್ಡಾ’ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಗುರುವಾರ (ಡಿ,7) ಹಂಚಿಕೊಂಡಿದ್ದಾರೆ. ಆಮಿರ್​ ಖಾನ್ ಅವರು ಹಣೆಗೆ ತಿಲಕ, ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿದ್ದು, ಕಲಶಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪತ್ನಿ ಕಿರಣ್​ ರಾವ್​ ಅವರು ಕೂಡ ಭಾಗವಹಿಸಿದ್ದರು.

ಆಮಿರ್​ ಖಾನ್​ ಅವರು ತಮ್ಮ ಚಿತ್ರ ಮತ್ತು ಹೇಳಿಕೆಗಳಿಂದ ಟೀಕೆಗೆ ಒಳಗಾಗುತ್ತಾರೆ. ಆದರೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿರುವುದು ಸದ್ಯ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್​ ಮಾಡಿದ್ದಾರೆ.

andolana

Recent Posts

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

46 mins ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

1 hour ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

1 hour ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

1 hour ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

2 hours ago