ನಟ ಆಮಿರ್ ಖಾನ್ ಅವರು ಬಾಲಿವುಡ್ನಲ್ಲಿ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಬಿಡುಗಡೆಯಾದ ‘ಲಾಲ್ ಸಿಂಗ್ ಛಡ್ಡಾ’ ಚಿತ್ರ ಮಾತ್ರ ಹೀನಾಯ ಸೋಲು ಕಂಡಿತು. ಈ ಚಿತ್ರದ ಸೋಲಿಗೆ ನಟ ಆಮಿರ್ ಖಾನ್ ಅವರು ಸಾಮಾಜಿಕವಾಗಿ ನೀಡಿದ ಕೆಲ ವಿವಾದಾತ್ಮಕ ಹೇಳಿಕೆಗಳು ಕಾರಣ ಎನ್ನಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಹಿಂದೂ ವಿರೋಧಿ ಎಂದು ಕೂಡ ಆಮಿರ್ ಖಾನ್ ಟೀಕಿಗೆ ಒಳಗಾಗಿದ್ದು ಇದೆ. ಆದರೆ ಸದ್ಯ ಹಿಂದೂ ಸಂಪ್ರದಾಯದಂತೆ ಆಮಿರ್ ಖಾನ್ ಮತ್ತು ಮಾಜಿ ಪತ್ನಿ ಕಿರಣ್ ರಾವ್ ಪೂಜೆ ಮಾಡಿರುವ ಫೋಟೋಗಳು ವೈರಲ್ ಆಗಿವೆ.
ನಟ ಆಮಿರ್ ಖಾನ್ ಇತ್ತೀಚೆಗೆ ತಮ್ಮ ಪ್ರೊಡಕ್ಷನ್ ಸಂಸ್ಥೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದ್ದಾರೆ. ಆಮಿರ್ ಖಾನ್ ಪೂಜೆ ಮಾಡುತ್ತಿರುವ ಫೋಟೋಗಳನ್ನು ‘ಲಾಲ್ ಸಿಂಗ್ ಛಡ್ಡಾ’ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಗುರುವಾರ (ಡಿ,7) ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಅವರು ಹಣೆಗೆ ತಿಲಕ, ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿದ್ದು, ಕಲಶಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪತ್ನಿ ಕಿರಣ್ ರಾವ್ ಅವರು ಕೂಡ ಭಾಗವಹಿಸಿದ್ದರು.
ಆಮಿರ್ ಖಾನ್ ಅವರು ತಮ್ಮ ಚಿತ್ರ ಮತ್ತು ಹೇಳಿಕೆಗಳಿಂದ ಟೀಕೆಗೆ ಒಳಗಾಗುತ್ತಾರೆ. ಆದರೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿರುವುದು ಸದ್ಯ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್ ಮಾಡಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…