ನಟ ಆಮಿರ್ ಖಾನ್ ಅವರು ಬಾಲಿವುಡ್ನಲ್ಲಿ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಬಿಡುಗಡೆಯಾದ ‘ಲಾಲ್ ಸಿಂಗ್ ಛಡ್ಡಾ’ ಚಿತ್ರ ಮಾತ್ರ ಹೀನಾಯ ಸೋಲು ಕಂಡಿತು. ಈ ಚಿತ್ರದ ಸೋಲಿಗೆ ನಟ ಆಮಿರ್ ಖಾನ್ ಅವರು ಸಾಮಾಜಿಕವಾಗಿ ನೀಡಿದ ಕೆಲ ವಿವಾದಾತ್ಮಕ ಹೇಳಿಕೆಗಳು ಕಾರಣ ಎನ್ನಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಹಿಂದೂ ವಿರೋಧಿ ಎಂದು ಕೂಡ ಆಮಿರ್ ಖಾನ್ ಟೀಕಿಗೆ ಒಳಗಾಗಿದ್ದು ಇದೆ. ಆದರೆ ಸದ್ಯ ಹಿಂದೂ ಸಂಪ್ರದಾಯದಂತೆ ಆಮಿರ್ ಖಾನ್ ಮತ್ತು ಮಾಜಿ ಪತ್ನಿ ಕಿರಣ್ ರಾವ್ ಪೂಜೆ ಮಾಡಿರುವ ಫೋಟೋಗಳು ವೈರಲ್ ಆಗಿವೆ.
ನಟ ಆಮಿರ್ ಖಾನ್ ಇತ್ತೀಚೆಗೆ ತಮ್ಮ ಪ್ರೊಡಕ್ಷನ್ ಸಂಸ್ಥೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದ್ದಾರೆ. ಆಮಿರ್ ಖಾನ್ ಪೂಜೆ ಮಾಡುತ್ತಿರುವ ಫೋಟೋಗಳನ್ನು ‘ಲಾಲ್ ಸಿಂಗ್ ಛಡ್ಡಾ’ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಗುರುವಾರ (ಡಿ,7) ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಅವರು ಹಣೆಗೆ ತಿಲಕ, ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿದ್ದು, ಕಲಶಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪತ್ನಿ ಕಿರಣ್ ರಾವ್ ಅವರು ಕೂಡ ಭಾಗವಹಿಸಿದ್ದರು.
ಆಮಿರ್ ಖಾನ್ ಅವರು ತಮ್ಮ ಚಿತ್ರ ಮತ್ತು ಹೇಳಿಕೆಗಳಿಂದ ಟೀಕೆಗೆ ಒಳಗಾಗುತ್ತಾರೆ. ಆದರೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿರುವುದು ಸದ್ಯ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್ ಮಾಡಿದ್ದಾರೆ.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…