ನಟ ಆಮಿರ್ ಖಾನ್ ಅವರು ಬಾಲಿವುಡ್ನಲ್ಲಿ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಬಿಡುಗಡೆಯಾದ ‘ಲಾಲ್ ಸಿಂಗ್ ಛಡ್ಡಾ’ ಚಿತ್ರ ಮಾತ್ರ ಹೀನಾಯ ಸೋಲು ಕಂಡಿತು. ಈ ಚಿತ್ರದ ಸೋಲಿಗೆ ನಟ ಆಮಿರ್ ಖಾನ್ ಅವರು ಸಾಮಾಜಿಕವಾಗಿ ನೀಡಿದ ಕೆಲ ವಿವಾದಾತ್ಮಕ ಹೇಳಿಕೆಗಳು ಕಾರಣ ಎನ್ನಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಹಿಂದೂ ವಿರೋಧಿ ಎಂದು ಕೂಡ ಆಮಿರ್ ಖಾನ್ ಟೀಕಿಗೆ ಒಳಗಾಗಿದ್ದು ಇದೆ. ಆದರೆ ಸದ್ಯ ಹಿಂದೂ ಸಂಪ್ರದಾಯದಂತೆ ಆಮಿರ್ ಖಾನ್ ಮತ್ತು ಮಾಜಿ ಪತ್ನಿ ಕಿರಣ್ ರಾವ್ ಪೂಜೆ ಮಾಡಿರುವ ಫೋಟೋಗಳು ವೈರಲ್ ಆಗಿವೆ.
ನಟ ಆಮಿರ್ ಖಾನ್ ಇತ್ತೀಚೆಗೆ ತಮ್ಮ ಪ್ರೊಡಕ್ಷನ್ ಸಂಸ್ಥೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದ್ದಾರೆ. ಆಮಿರ್ ಖಾನ್ ಪೂಜೆ ಮಾಡುತ್ತಿರುವ ಫೋಟೋಗಳನ್ನು ‘ಲಾಲ್ ಸಿಂಗ್ ಛಡ್ಡಾ’ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಗುರುವಾರ (ಡಿ,7) ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಅವರು ಹಣೆಗೆ ತಿಲಕ, ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿದ್ದು, ಕಲಶಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪತ್ನಿ ಕಿರಣ್ ರಾವ್ ಅವರು ಕೂಡ ಭಾಗವಹಿಸಿದ್ದರು.
ಆಮಿರ್ ಖಾನ್ ಅವರು ತಮ್ಮ ಚಿತ್ರ ಮತ್ತು ಹೇಳಿಕೆಗಳಿಂದ ಟೀಕೆಗೆ ಒಳಗಾಗುತ್ತಾರೆ. ಆದರೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿರುವುದು ಸದ್ಯ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್ ಮಾಡಿದ್ದಾರೆ.
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…