ನಟ ಆಮಿರ್ ಖಾನ್ ಅವರು ಬಾಲಿವುಡ್ನಲ್ಲಿ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಬಿಡುಗಡೆಯಾದ ‘ಲಾಲ್ ಸಿಂಗ್ ಛಡ್ಡಾ’ ಚಿತ್ರ ಮಾತ್ರ ಹೀನಾಯ ಸೋಲು ಕಂಡಿತು. ಈ ಚಿತ್ರದ ಸೋಲಿಗೆ ನಟ ಆಮಿರ್ ಖಾನ್ ಅವರು ಸಾಮಾಜಿಕವಾಗಿ ನೀಡಿದ ಕೆಲ ವಿವಾದಾತ್ಮಕ ಹೇಳಿಕೆಗಳು ಕಾರಣ ಎನ್ನಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಹಿಂದೂ ವಿರೋಧಿ ಎಂದು ಕೂಡ ಆಮಿರ್ ಖಾನ್ ಟೀಕಿಗೆ ಒಳಗಾಗಿದ್ದು ಇದೆ. ಆದರೆ ಸದ್ಯ ಹಿಂದೂ ಸಂಪ್ರದಾಯದಂತೆ ಆಮಿರ್ ಖಾನ್ ಮತ್ತು ಮಾಜಿ ಪತ್ನಿ ಕಿರಣ್ ರಾವ್ ಪೂಜೆ ಮಾಡಿರುವ ಫೋಟೋಗಳು ವೈರಲ್ ಆಗಿವೆ.
ನಟ ಆಮಿರ್ ಖಾನ್ ಇತ್ತೀಚೆಗೆ ತಮ್ಮ ಪ್ರೊಡಕ್ಷನ್ ಸಂಸ್ಥೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದ್ದಾರೆ. ಆಮಿರ್ ಖಾನ್ ಪೂಜೆ ಮಾಡುತ್ತಿರುವ ಫೋಟೋಗಳನ್ನು ‘ಲಾಲ್ ಸಿಂಗ್ ಛಡ್ಡಾ’ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಗುರುವಾರ (ಡಿ,7) ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಅವರು ಹಣೆಗೆ ತಿಲಕ, ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿದ್ದು, ಕಲಶಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪತ್ನಿ ಕಿರಣ್ ರಾವ್ ಅವರು ಕೂಡ ಭಾಗವಹಿಸಿದ್ದರು.
ಆಮಿರ್ ಖಾನ್ ಅವರು ತಮ್ಮ ಚಿತ್ರ ಮತ್ತು ಹೇಳಿಕೆಗಳಿಂದ ಟೀಕೆಗೆ ಒಳಗಾಗುತ್ತಾರೆ. ಆದರೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿರುವುದು ಸದ್ಯ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್ ಮಾಡಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…