ಚಿತ್ರ ಮಂಜರಿ

ಇನ್ಮುಂದೆ ಯಾರೂ ನನಗೆ ಹೆಣ್ಣು ಕೊಡುವುದಿಲ್ಲ: ಅಭಿಷೇಕ್‌ ಅಂಬರೀಶ್‌

ತಮ್ಮ ನಿಶ್ಚಿತಾರ್ಥ, ಮದುವೆ ಸುದ್ದಿಯ ಬಗ್ಗೆ ಅಭಿಷೇಕ್‌ ಅಂಬರೀಶ್‌ ಹೇಳಿದ್ದೇನು ?

ಮೈಸೂರು: ಹುಡುಗಿ ಯಾರೂ ಅಂತಾನೆ ನಂಗೆ ಗೊತ್ತಿಲ್ಲ, ಪ್ರತಿ ವರ್ಷ ನನಗೆ ಎಂಗೇಜ್ ಮೆಂಟ್ ಮಾಡಿಸ್ತೀರಾ, ನಿಮ್ಮ ಸುದ್ದಿ ನಂಬಿ ಮುಂದೆ ನನಗೆ ಯಾರು ಹೆಣ್ಣು ಕೊಡೊದಿಲ್ಲ… ಹೀಗೆಂದು ನಗೆ ಚಟಾಕಿ ಹಾರಿಸಿದವರು ನಟ ಅಭಿಷೇಕ್‌ ಅಂಬರೀಷ್.

ರೆಬಲ್ ಸ್ಟಾರ್ ಮತ್ತು ಸುಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಮದುವೆಗೆ ಸಜ್ಜಾಗಿದ್ದಾರೆ. ಡಿಸೆಂಬರ್‌ 11ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಅಂಬರೀಷ್‌ ಅವರ ೪ನೇ ಸಂಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸುಮಲತಾ ಅವರು ಮಗನ ನಿಶ್ಚಿತಾರ್ಥ ಸುದ್ದಿಯನ್ನು ನಿರಾಕರಿಸಿ “” ಕಳೆದ ಎರಡು ವರ್ಷಗಳಿಂದಲೂ ಇಂಥ ವದಂತಿ ಹರಡುತ್ತಲೇ ಇದೆ. ಡಿಸೆಂಬರ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತದೆ ಎಂಬುದೆಲ್ಲ ಸುಳ್ಳು. ಆ ರೀತಿ ಯಾವುದೇ ಪ್ಲ್ಯಾನ್​ ಇಲ್ಲ, ಸದ್ಯ ಆತ ಸಿನಿಮಾದಲ್ಲಿ ಬ್ಯುಸಿ ಇದ್ದಾನೆʼʼ ಎಂದು ತಿಳಿಸಿದರು.

ಡಿಸೆಂಬರ್ 11ರಂದು ಅಭಿಷೇಕ್ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳು ಆಗಿದ್ದುಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ. ಮಾಡೆಲ್‌ ಲೋಕದ ಬೆಡಗಿಯನ್ನು ಅಭಿಷೇಕ್‌ ವರಿಸಲಿದ್ದಾರೆ ಎಂದು ಸುದ್ದಿಗಳು ಹರಿದಾಡಿದ್ದವು. .

ತಮ್ಮ ಮದುವೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಭಿಷೇಕ್,ಕಳೆದ 15 ದಿನಗಳಿಂದ ನಾನು ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದೀನಿ, ಇದರ ಮದ್ಯೆ ಹೇಗೆ, ನಾನು ಎಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿ ಎಂದು ಪ್ರಶ್ನಿಸುವ ಮೂಲತ ತಮ್ಮ ಮದುವೆ ಸಂಬಂಧ ಹರಡಿದ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಅಮರ್ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. ” ಬ್ಯಾಡ್ ಮ್ಯಾನರ್ಸ್ʼ ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್‌ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

3 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

3 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

4 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

4 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago