ತಮ್ಮ ನಿಶ್ಚಿತಾರ್ಥ, ಮದುವೆ ಸುದ್ದಿಯ ಬಗ್ಗೆ ಅಭಿಷೇಕ್ ಅಂಬರೀಶ್ ಹೇಳಿದ್ದೇನು ?
ಮೈಸೂರು: ಹುಡುಗಿ ಯಾರೂ ಅಂತಾನೆ ನಂಗೆ ಗೊತ್ತಿಲ್ಲ, ಪ್ರತಿ ವರ್ಷ ನನಗೆ ಎಂಗೇಜ್ ಮೆಂಟ್ ಮಾಡಿಸ್ತೀರಾ, ನಿಮ್ಮ ಸುದ್ದಿ ನಂಬಿ ಮುಂದೆ ನನಗೆ ಯಾರು ಹೆಣ್ಣು ಕೊಡೊದಿಲ್ಲ… ಹೀಗೆಂದು ನಗೆ ಚಟಾಕಿ ಹಾರಿಸಿದವರು ನಟ ಅಭಿಷೇಕ್ ಅಂಬರೀಷ್.
ರೆಬಲ್ ಸ್ಟಾರ್ ಮತ್ತು ಸುಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಮದುವೆಗೆ ಸಜ್ಜಾಗಿದ್ದಾರೆ. ಡಿಸೆಂಬರ್ 11ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಡಿಸೆಂಬರ್ 11ರಂದು ಅಭಿಷೇಕ್ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳು ಆಗಿದ್ದುಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ. ಮಾಡೆಲ್ ಲೋಕದ ಬೆಡಗಿಯನ್ನು ಅಭಿಷೇಕ್ ವರಿಸಲಿದ್ದಾರೆ ಎಂದು ಸುದ್ದಿಗಳು ಹರಿದಾಡಿದ್ದವು. .
ತಮ್ಮ ಮದುವೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಭಿಷೇಕ್,ಕಳೆದ 15 ದಿನಗಳಿಂದ ನಾನು ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದೀನಿ, ಇದರ ಮದ್ಯೆ ಹೇಗೆ, ನಾನು ಎಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿ ಎಂದು ಪ್ರಶ್ನಿಸುವ ಮೂಲತ ತಮ್ಮ ಮದುವೆ ಸಂಬಂಧ ಹರಡಿದ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಅಮರ್ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. ” ಬ್ಯಾಡ್ ಮ್ಯಾನರ್ಸ್ʼ ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…