ತಮ್ಮ ನಿಶ್ಚಿತಾರ್ಥ, ಮದುವೆ ಸುದ್ದಿಯ ಬಗ್ಗೆ ಅಭಿಷೇಕ್ ಅಂಬರೀಶ್ ಹೇಳಿದ್ದೇನು ?
ಮೈಸೂರು: ಹುಡುಗಿ ಯಾರೂ ಅಂತಾನೆ ನಂಗೆ ಗೊತ್ತಿಲ್ಲ, ಪ್ರತಿ ವರ್ಷ ನನಗೆ ಎಂಗೇಜ್ ಮೆಂಟ್ ಮಾಡಿಸ್ತೀರಾ, ನಿಮ್ಮ ಸುದ್ದಿ ನಂಬಿ ಮುಂದೆ ನನಗೆ ಯಾರು ಹೆಣ್ಣು ಕೊಡೊದಿಲ್ಲ… ಹೀಗೆಂದು ನಗೆ ಚಟಾಕಿ ಹಾರಿಸಿದವರು ನಟ ಅಭಿಷೇಕ್ ಅಂಬರೀಷ್.
ರೆಬಲ್ ಸ್ಟಾರ್ ಮತ್ತು ಸುಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಮದುವೆಗೆ ಸಜ್ಜಾಗಿದ್ದಾರೆ. ಡಿಸೆಂಬರ್ 11ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಡಿಸೆಂಬರ್ 11ರಂದು ಅಭಿಷೇಕ್ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳು ಆಗಿದ್ದುಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ. ಮಾಡೆಲ್ ಲೋಕದ ಬೆಡಗಿಯನ್ನು ಅಭಿಷೇಕ್ ವರಿಸಲಿದ್ದಾರೆ ಎಂದು ಸುದ್ದಿಗಳು ಹರಿದಾಡಿದ್ದವು. .
ತಮ್ಮ ಮದುವೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಭಿಷೇಕ್,ಕಳೆದ 15 ದಿನಗಳಿಂದ ನಾನು ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದೀನಿ, ಇದರ ಮದ್ಯೆ ಹೇಗೆ, ನಾನು ಎಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿ ಎಂದು ಪ್ರಶ್ನಿಸುವ ಮೂಲತ ತಮ್ಮ ಮದುವೆ ಸಂಬಂಧ ಹರಡಿದ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಅಮರ್ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. ” ಬ್ಯಾಡ್ ಮ್ಯಾನರ್ಸ್ʼ ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…