ತಮ್ಮ ನಿಶ್ಚಿತಾರ್ಥ, ಮದುವೆ ಸುದ್ದಿಯ ಬಗ್ಗೆ ಅಭಿಷೇಕ್ ಅಂಬರೀಶ್ ಹೇಳಿದ್ದೇನು ?
ಮೈಸೂರು: ಹುಡುಗಿ ಯಾರೂ ಅಂತಾನೆ ನಂಗೆ ಗೊತ್ತಿಲ್ಲ, ಪ್ರತಿ ವರ್ಷ ನನಗೆ ಎಂಗೇಜ್ ಮೆಂಟ್ ಮಾಡಿಸ್ತೀರಾ, ನಿಮ್ಮ ಸುದ್ದಿ ನಂಬಿ ಮುಂದೆ ನನಗೆ ಯಾರು ಹೆಣ್ಣು ಕೊಡೊದಿಲ್ಲ… ಹೀಗೆಂದು ನಗೆ ಚಟಾಕಿ ಹಾರಿಸಿದವರು ನಟ ಅಭಿಷೇಕ್ ಅಂಬರೀಷ್.
ರೆಬಲ್ ಸ್ಟಾರ್ ಮತ್ತು ಸುಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಮದುವೆಗೆ ಸಜ್ಜಾಗಿದ್ದಾರೆ. ಡಿಸೆಂಬರ್ 11ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಡಿಸೆಂಬರ್ 11ರಂದು ಅಭಿಷೇಕ್ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳು ಆಗಿದ್ದುಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ. ಮಾಡೆಲ್ ಲೋಕದ ಬೆಡಗಿಯನ್ನು ಅಭಿಷೇಕ್ ವರಿಸಲಿದ್ದಾರೆ ಎಂದು ಸುದ್ದಿಗಳು ಹರಿದಾಡಿದ್ದವು. .
ತಮ್ಮ ಮದುವೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಭಿಷೇಕ್,ಕಳೆದ 15 ದಿನಗಳಿಂದ ನಾನು ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದೀನಿ, ಇದರ ಮದ್ಯೆ ಹೇಗೆ, ನಾನು ಎಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿ ಎಂದು ಪ್ರಶ್ನಿಸುವ ಮೂಲತ ತಮ್ಮ ಮದುವೆ ಸಂಬಂಧ ಹರಡಿದ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಅಮರ್ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. ” ಬ್ಯಾಡ್ ಮ್ಯಾನರ್ಸ್ʼ ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…
ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…