ಮೈಸೂರು: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ದಂಪತಿ ಪುತ್ರ, ನಟ ಅಭಿಷೇಕ್ ಅವರ ಮದುವೆ ನಿಶ್ಚಯವಾಗಿದೆ. ಅಭಿಷೇಕ್ ಅವರ ನಿಶ್ಚಿತಾರ್ಥ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಆದರೆ ಅಭಿಷೇಕ್ ಮದುವೆ ಆಗಲಿರುವ ಹುಡುಗಿ ಖ್ಯಾತ ಮಾಡೆಲ್ ಆಗಿದ್ದಾರೆ. ಇಷ್ಟು ಬಿಟ್ಟರೆ ಈ ಬಗ್ಗೆ ಅಂಬರೀಷ್ ಕುಟುಂಬ ಯಾವುದೇ ವಿವರಗಳನ್ನು ಬಿಟ್ಟು ಕೊಟ್ಟಿಲ್ಲ. ಇದು ಆರೆಂಜ್ ಮ್ಯಾರೇಜ್ ಆಗಿದ್ದು, ನಿಶ್ಚಿತಾರ್ಥದವರೆಗೂ ಯಾವುದೇ ವಿವರಗಳನ್ನು ಬಿಟ್ಟುಕೊಡದಿರಲು ಸುಮಲತಾ ಮತ್ತು ಅಭಿಷೇಕ್ ನಿರ್ಧರಿಸಿದ್ದಾರೆ.
ನಿಶ್ಚಿತಾರ್ಥಕ್ಕೆ ಎಲ್ಲಾ ತಯಾರಿ ನಡೆದಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ‘ಅಮರ್’ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. “ಬ್ಯಾಡ್ ಮ್ಯಾನರ್ಸ್” ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…