ಮೈಸೂರು: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ದಂಪತಿ ಪುತ್ರ, ನಟ ಅಭಿಷೇಕ್ ಅವರ ಮದುವೆ ನಿಶ್ಚಯವಾಗಿದೆ. ಅಭಿಷೇಕ್ ಅವರ ನಿಶ್ಚಿತಾರ್ಥ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಆದರೆ ಅಭಿಷೇಕ್ ಮದುವೆ ಆಗಲಿರುವ ಹುಡುಗಿ ಖ್ಯಾತ ಮಾಡೆಲ್ ಆಗಿದ್ದಾರೆ. ಇಷ್ಟು ಬಿಟ್ಟರೆ ಈ ಬಗ್ಗೆ ಅಂಬರೀಷ್ ಕುಟುಂಬ ಯಾವುದೇ ವಿವರಗಳನ್ನು ಬಿಟ್ಟು ಕೊಟ್ಟಿಲ್ಲ. ಇದು ಆರೆಂಜ್ ಮ್ಯಾರೇಜ್ ಆಗಿದ್ದು, ನಿಶ್ಚಿತಾರ್ಥದವರೆಗೂ ಯಾವುದೇ ವಿವರಗಳನ್ನು ಬಿಟ್ಟುಕೊಡದಿರಲು ಸುಮಲತಾ ಮತ್ತು ಅಭಿಷೇಕ್ ನಿರ್ಧರಿಸಿದ್ದಾರೆ.
ನಿಶ್ಚಿತಾರ್ಥಕ್ಕೆ ಎಲ್ಲಾ ತಯಾರಿ ನಡೆದಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ‘ಅಮರ್’ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. “ಬ್ಯಾಡ್ ಮ್ಯಾನರ್ಸ್” ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…