ಚಿತ್ರ ಮಂಜರಿ

ಅಪಘಾತ ಪ್ರಕರಣ : ಉದಯೋನ್ಮುಖ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್‌

ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಇಬ್ಬರನ್ನು ಬಲಿ ಪಡೆದ ಕಾರು ಅಪಘಾತ  ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾರು ಚಾಲಕನನ್ನು ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಬಂಧಿಸಿದ್ದಾರೆ.‌‌

ಆರೋಪಿ ಕಾರು ಚಾಲಕನನ್ನು “ಮ್ಯಾಡ್ ಇನ್ ಕುಡ್ಲ” ಹೆಸರಿನ ಯೂ-ಟ್ಯೂಬರ್ ಹಳೆಯಂಗಡಿ ಇಂದಿರಾನಗರ ನಿವಾಸಿ ಅರ್ಪಿತ್(35) ಎಂದು ಗುರುತಿಸಲಾಗಿದೆ.ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಅಪಘಾತಕ್ಕೆ ಕಾರಣವಾದ ಆರೋಪಿಯ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಪ್ರದೇಶದಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯ ಟೈರ್ ಪಂಕ್ಚರ್ ಆಗಿತ್ತು. ಲಾರಿಯನ್ನು  ಪಡುಪಣಂಬೂರು ಬಳಿ ಹೆದ್ದಾರಿ ಬದಿ ನಿಲ್ಲಿಸಿ ಚಾಲಕ ಹಾಗೂ ಸಿಬ್ಬಂದಿ ಅದನ್ನು ದುರಸ್ತಿ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು.  ಕಾರು ಚಾಲಕ ಅರ್ಪಿತ್ ಅವರು ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರು ಹೆದ್ದಾರಿಯ  ಎಡಗಡೆಗೆ ರಭಸವಾಗಿ ನುಗ್ಗಿ  ಡಿಕ್ಕಿ ಹೊಡೆದಿತ್ತು. ಚಾಲಕ ಅರ್ಪಿತ್ ಕಾರನ್ನು ನಿಲ್ಲಿಸದೇ  ಪರಾರಿಯಾಗಿದ್ದರು.  ಬಬುಲು (23), ಆಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದು ಅವರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಘಟನೆಯಲ್ಲಿ  ಕೇರಳ ನಿವಾಸಿ ಅನೀಶ್(42) ಗಂಭೀರ ಗಾಯಗೊಂಡಿದ್ದರು. ಕಾರು ಅಪಘಾತ ಸಂಭವಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಯಕ್ಷಗಾನ ನಡೆಯುತ್ತಿತ್ತು. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಹಾಗೂ ಸಿ.ಸಿ.ಟಿ.ವಿ. ಕ್ಯಾಮೆರಾದ ಲ್ಲಿ ದಾಖಲಾದ ದೃಶ್ಯಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ. ಆರೋಪಿಯನ್ಬು ಜಾಮೀನಿನ‌ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು  ಮಾಹಿತಿ ನೀಡಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

8 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

36 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago