ಚಿತ್ರ ಮಂಜರಿ

ಬೈಕ್ ಟ್ಯಾಕ್ಸಿಯಲ್ಲಿ ತೆರಳುತ್ತಿದ್ದಾಗ ಅಪಘಾತ: ಉದಯೋನ್ಮುಕ ನಟಿ ಸಾವು

ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ ದಾಸ್‌ಗುಪ್ತ ಮೃತಪಟ್ಟಿದ್ದು ನಟಿಯ ಸಾವಿನಿಂದ ಅವರ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿಯಿಂದ ಅವರ ಅಭಿಮಾನಿಗಳು ಕೂಡ ದುಃಖಿತರಾಗಿದ್ದಾರೆ.

ಮನೆಗೆ ವಾಪಸಾಗುತ್ತಿದ್ದಾಗ ಮಾರ್ಗಮಧ್ಯೆ ಸೈಕಲ್ ತುಳಿಯುತ್ತಿದ್ದ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದಾರೆ. ಹೀಗಾಗಿ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ದಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸುಚಂದ್ರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಟ್ರಕ್‌ಗೆ ಆಕೆಯ ಮೇಲೆ ಹರಿದಿದ್ದು ನಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ವಾಹನಗಳ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು.

ಅಪಘಾತದ ಸುದ್ದಿ ತಿಳಿದ ಕೂಡಲೇ ಬಾರಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ನಟಿಯ ನಿಧನದಿಂದಾಗಿ ಬೆಂಗಾಲಿ ಚಿತ್ರರಂಗದಲ್ಲಿ ಶೋಕ ಮಡುಗಟ್ಟಿದೆ.

ಸುಚಂದ್ರ ದಾಸಗುಪ್ತ ಯಾರು?
ಸುಚಂದ್ರ ದಾಸ್‌ಗುಪ್ತ ಬಂಗಾಳಿ ಕಿರುತೆರೆಯಲ್ಲಿ ಪ್ರಸಿದ್ಧ ನಟಿಯರಲ್ಲಿ ಒಬ್ಬರು. ಆಕೆ ಅನೇಕ ಪ್ರಸಿದ್ಧ ಬಂಗಾಳಿ ಟಿವಿ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ್ದಾರೆ. ‘ಗೌರಿ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

3 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

3 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

3 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

4 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

5 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

5 hours ago