ಚಿತ್ರ ಮಂಜರಿ

ಬೈಕ್ ಟ್ಯಾಕ್ಸಿಯಲ್ಲಿ ತೆರಳುತ್ತಿದ್ದಾಗ ಅಪಘಾತ: ಉದಯೋನ್ಮುಕ ನಟಿ ಸಾವು

ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ ದಾಸ್‌ಗುಪ್ತ ಮೃತಪಟ್ಟಿದ್ದು ನಟಿಯ ಸಾವಿನಿಂದ ಅವರ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿಯಿಂದ ಅವರ ಅಭಿಮಾನಿಗಳು ಕೂಡ ದುಃಖಿತರಾಗಿದ್ದಾರೆ.

ಮನೆಗೆ ವಾಪಸಾಗುತ್ತಿದ್ದಾಗ ಮಾರ್ಗಮಧ್ಯೆ ಸೈಕಲ್ ತುಳಿಯುತ್ತಿದ್ದ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದಾರೆ. ಹೀಗಾಗಿ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ದಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸುಚಂದ್ರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಟ್ರಕ್‌ಗೆ ಆಕೆಯ ಮೇಲೆ ಹರಿದಿದ್ದು ನಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ವಾಹನಗಳ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು.

ಅಪಘಾತದ ಸುದ್ದಿ ತಿಳಿದ ಕೂಡಲೇ ಬಾರಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ನಟಿಯ ನಿಧನದಿಂದಾಗಿ ಬೆಂಗಾಲಿ ಚಿತ್ರರಂಗದಲ್ಲಿ ಶೋಕ ಮಡುಗಟ್ಟಿದೆ.

ಸುಚಂದ್ರ ದಾಸಗುಪ್ತ ಯಾರು?
ಸುಚಂದ್ರ ದಾಸ್‌ಗುಪ್ತ ಬಂಗಾಳಿ ಕಿರುತೆರೆಯಲ್ಲಿ ಪ್ರಸಿದ್ಧ ನಟಿಯರಲ್ಲಿ ಒಬ್ಬರು. ಆಕೆ ಅನೇಕ ಪ್ರಸಿದ್ಧ ಬಂಗಾಳಿ ಟಿವಿ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ್ದಾರೆ. ‘ಗೌರಿ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

andolanait

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

9 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

9 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

12 hours ago