ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ.
ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ ದಾಸ್ಗುಪ್ತ ಮೃತಪಟ್ಟಿದ್ದು ನಟಿಯ ಸಾವಿನಿಂದ ಅವರ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿಯಿಂದ ಅವರ ಅಭಿಮಾನಿಗಳು ಕೂಡ ದುಃಖಿತರಾಗಿದ್ದಾರೆ.
ಮನೆಗೆ ವಾಪಸಾಗುತ್ತಿದ್ದಾಗ ಮಾರ್ಗಮಧ್ಯೆ ಸೈಕಲ್ ತುಳಿಯುತ್ತಿದ್ದ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದಾರೆ. ಹೀಗಾಗಿ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ದಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸುಚಂದ್ರ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಟ್ರಕ್ಗೆ ಆಕೆಯ ಮೇಲೆ ಹರಿದಿದ್ದು ನಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ವಾಹನಗಳ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು.
ಅಪಘಾತದ ಸುದ್ದಿ ತಿಳಿದ ಕೂಡಲೇ ಬಾರಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ನಟಿಯ ನಿಧನದಿಂದಾಗಿ ಬೆಂಗಾಲಿ ಚಿತ್ರರಂಗದಲ್ಲಿ ಶೋಕ ಮಡುಗಟ್ಟಿದೆ.
ಸುಚಂದ್ರ ದಾಸಗುಪ್ತ ಯಾರು?
ಸುಚಂದ್ರ ದಾಸ್ಗುಪ್ತ ಬಂಗಾಳಿ ಕಿರುತೆರೆಯಲ್ಲಿ ಪ್ರಸಿದ್ಧ ನಟಿಯರಲ್ಲಿ ಒಬ್ಬರು. ಆಕೆ ಅನೇಕ ಪ್ರಸಿದ್ಧ ಬಂಗಾಳಿ ಟಿವಿ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ್ದಾರೆ. ‘ಗೌರಿ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…