ಚಿತ್ರ ಮಂಜರಿ

ನಟ ಚಿರಂಜೀವಿ ಸರ್ಜಾಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿ

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ನೀಡಲಾಗಿದೆ.

ಎರಡು ದಿನ‌  ಅದ್ದೂರಿಯಾಗಿ‌ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು. ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ‌ ಯಶಸ್ವಿಯಾಗಿ ತೆರೆ ಕಂಡಿದೆ.
ಕಾರ್ಯಕ್ರಮ ಪ್ರತಿ ವರ್ಷದಂತೆ ಈ ಬಾರಿಯೂ ಕಲರ್ ಫುಲ್ ಆಗಿತ್ತು. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಕಾವ್ಯಾ ಶಾ, ವಿಕ್ರಮ್ ರವಿಚಂದ್ರನ್, ನಿಧಿ ಸುಬ್ಬಯ್ಯ, ಸಂಗೀತಾ ಶೃಂಗೇರಿ, ವಿರಾಟ್ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು. ಎಸ್. ಪಿ. ಬಿ ಚರಣ್, ಸಿಂಗರ್ ಮನು, ನವೀನ್ ಸಜ್ಜು, ಅನುರಾಧ ಭಟ್, ವಿಜಯ್ ಪ್ರಕಾಶ್ ತಮ್ಮ ಗಾಯನದ ಮೂಲಕ ಕಾರ್ಯಕ್ರಮದ ರಂಗು ಹೆಚ್ಚಿಸಿದ್ರು. ಮಾನ್ವಿತ ಹರೀಶ್, ಸೃಜನ್ ಲೊಕೇಶ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ರವಿಶಂಕರ್ ಸೇರಿದಂತೆ ಹಲವು ತಾರೆಯರು ಕಲರ್ ಫುಲ್ ಕರುನಾಡ ಸಂಭ್ರಮ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago