ಚಿತ್ರ ಮಂಜರಿ

ಹುಲಿ ಉಗುರಿನ ಸುಳಿಯಲ್ಲಿ ನಟ ದರ್ಶನ್, ವಿನಯ್ ಗುರೂಜಿ!

ಬೆಂಗಳೂರು : ಎರಡು ದಿನಗಳ ಹಿಂದಷ್ಟೇ, ಜನಪ್ರಿಯ ರಿಯಾಲಿಟಿ ಶೋ ಆದ ಕನ್ನಡದ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರು ಹುಲಿ ಉಗುರುಳ್ಳ ಡಾಲರ್ – ಚೈನ್ ಅನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದರು. ಆ ವಿಚಾರ ಸುದ್ದಿ ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅ. 24ರಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಈಗ ನಟ ದರ್ಶನ್ ಹಾಗೂ ಜನಪ್ರಿಯ ಧರ್ಮಗುರುವಾದ ವಿನಯ್ ಗುರೂಜಿಯವರು ಇದೇ ರೀತಿಯ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಂಗಳೂರಿನಲ್ಲಿರುವ ಸರ್ವಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸಿ.ಎಂ. ಶಿವಕುಮಾರ್ ನಾಯಕ್ ಅವರು, ಇವರಿಬ್ಬರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸುವುದಾಗಿ ಅ. 23ರಂದೇ ಪ್ರಕಟಿಸಿದ್ದರು. ಸಾಮಾಜಿಕ ಜಾಲತಾಣವೊಂದರಲ್ಲಿ ಅವರು ಹಾಕಿದ್ದ ಪೋಸ್ಟ್ ವೈರಲ್ ಆಗಿತ್ತು.

ಆರೋಪವೇನು.? : ಸಿ.ಎಂ. ಶಿವಕುಮಾರ್ ಅವರು ಹಾಕಿರುವ ಪೋಸ್ಟ್ ನ ಪ್ರಕಾರ, “ನಟ ದರ್ಶನ್ ಅವರು ತಮ್ಮದೊಂದು ಫೋಟೋದಲ್ಲಿ ಚಿನ್ನದ ಚೈನ್ ನಲ್ಲಿ ಹುಲಿಯ ಉಗುರು ಇರುವ ಡಾಲರ್ ಅನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದಾರೆ. ಅತ್ತ, ವಿನಯ್ ಗುರೂಜಿಯವರು ತಮ್ಮ ಭಾವಚಿತ್ರವೊಂದರಲ್ಲಿ ಹುಲಿಯ ಚರ್ಮದ ಮೇಲೆ ಕುಳಿತಿದ್ದಾರೆ.

ಇದು ಕಾನೂನಿನ ಉಲ್ಲಂಘನೆಯಾಗಿದೆ. ಅರಣ್ಯ ಕಾಯ್ದೆಯಡಿ ಇವರನ್ನು ದೂರು ದಾಖಲು ಮಾಡಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದಿಂದ ದೂರು ಕೊಡುತ್ತಿದ್ದೇವೆ ಎಂದು ಹೇಳಿರುವ ಅವರು, ಈ ಬರಹದ ಕೆಳಗಡೆ ಒಕ್ಕೂಟದ ಅಧ್ಯಕ್ಷರು ಸಿ.ಎಂ. ಶಿವಕುಮಾರ್ ಎಂದು ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ.

ವರ್ತೂರು ಸಂತೋಷ್ ಪ್ರಕರಣವೇನು? : ಅ. 23ರ ರಾತ್ರಿಯೇ ಬೆಂಗಳೂರಿನ ಹೊರವಲಯದಲ್ಲಿರುವ ರಾಮೋಹಳ್ಳಿಯ ಬಳಿ ಹಾಕಲಾಗಿರುವ ಬಿಗ್ ಬಾಸ್ ಸೆಟ್ ನಿಂದಲೇ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಸಂತೋಷ್ ಅವರ ಕೊರಳಲ್ಲಿದ್ದ, ಹುಲಿ ಉಗುರಿನದ್ದು ಎಂದು ಹೇಳಲಾಗಿರುವ ಡಾಲರ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಡಾಲರ್ ನಲ್ಲಿರುವುದು ಹುಲಿಯ ಉಗುರೇ ಅಥವಾ ಅಲ್ಲವೇ ಎಂಬುದನ್ನು ತಿಳಿಯಲು ಲಾಕೆಟನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಇನ್ನು, ವರ್ತೂರು ಸಂತೋಷ್ ಅವರ ಬಂಧನದ ಬಗ್ಗೆ ಸಂತೋಷ್ ಅವರ ತಾಯಿ ಪ್ರತಿಕ್ರಿಯಿಸಿದ್ದು, ಇದೊಂದು ಷಡ್ಯಂತ್ರವಾಗಿದೆ. ನಾವು ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುವವರು. ನಮಗೆ ಹುಲಿ ಉಗುರು ಮತ್ತೇನೂ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪೇಟೆಯಿಂದ ಹಣಕ್ಕೆ ಖರೀದಿಸಿದ ತಂದಿದ್ದಾಗಿ ನನ್ನ ಮಗ (ಸಂತೋಷ್) ಆ ಲಾಕೆಟನ್ನು ನನಗೆ ತೋರಿಸಿದ್ದ. ನಾನು ಅದಕ್ಕೆ ಚಿನ್ನದ ಸರ ಮಾಡಿಸಿಕೊಂಡು ಹಾಕಿಕೋ ಎಂದು ಹೇಳಿದ್ದೆ. ಅದರಂತೆ, ಆತ ಚಿನ್ನದ ಸರವನ್ನು ಮಾಡಿಸಿಕೊಂಡು ಹಾಕಿಕೊಂಡಿದ್ದ. ಇಷ್ಟು ವರ್ಷವಾದ ನಂತರ ಈಗ ಯಾರೋ ದೂರು ನೀಡಿದ್ದಾರೆ. ನನ್ನ ಮನಗ ಏಳ್ಗೆಯನ್ನು ಸಹಿಸಲಾಗದೇ ಇಂಥದ್ದೊಂದು ಷಡ್ಯಂತ್ರವನ್ನು ಮಾಡಲಾಗಿದೆ ಎಂದು ಹೇಳಿದ್ದರು.

andolanait

Recent Posts

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

17 mins ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

31 mins ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

43 mins ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

1 hour ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

1 hour ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

2 hours ago