ಬೆಂಗಳೂರು : ಎರಡು ದಿನಗಳ ಹಿಂದಷ್ಟೇ, ಜನಪ್ರಿಯ ರಿಯಾಲಿಟಿ ಶೋ ಆದ ಕನ್ನಡದ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರು ಹುಲಿ ಉಗುರುಳ್ಳ ಡಾಲರ್ – ಚೈನ್ ಅನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದರು. ಆ ವಿಚಾರ ಸುದ್ದಿ ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅ. 24ರಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಈಗ ನಟ ದರ್ಶನ್ ಹಾಗೂ ಜನಪ್ರಿಯ ಧರ್ಮಗುರುವಾದ ವಿನಯ್ ಗುರೂಜಿಯವರು ಇದೇ ರೀತಿಯ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಂಗಳೂರಿನಲ್ಲಿರುವ ಸರ್ವಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸಿ.ಎಂ. ಶಿವಕುಮಾರ್ ನಾಯಕ್ ಅವರು, ಇವರಿಬ್ಬರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸುವುದಾಗಿ ಅ. 23ರಂದೇ ಪ್ರಕಟಿಸಿದ್ದರು. ಸಾಮಾಜಿಕ ಜಾಲತಾಣವೊಂದರಲ್ಲಿ ಅವರು ಹಾಕಿದ್ದ ಪೋಸ್ಟ್ ವೈರಲ್ ಆಗಿತ್ತು.
ಆರೋಪವೇನು.? : ಸಿ.ಎಂ. ಶಿವಕುಮಾರ್ ಅವರು ಹಾಕಿರುವ ಪೋಸ್ಟ್ ನ ಪ್ರಕಾರ, “ನಟ ದರ್ಶನ್ ಅವರು ತಮ್ಮದೊಂದು ಫೋಟೋದಲ್ಲಿ ಚಿನ್ನದ ಚೈನ್ ನಲ್ಲಿ ಹುಲಿಯ ಉಗುರು ಇರುವ ಡಾಲರ್ ಅನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದಾರೆ. ಅತ್ತ, ವಿನಯ್ ಗುರೂಜಿಯವರು ತಮ್ಮ ಭಾವಚಿತ್ರವೊಂದರಲ್ಲಿ ಹುಲಿಯ ಚರ್ಮದ ಮೇಲೆ ಕುಳಿತಿದ್ದಾರೆ.
ಇದು ಕಾನೂನಿನ ಉಲ್ಲಂಘನೆಯಾಗಿದೆ. ಅರಣ್ಯ ಕಾಯ್ದೆಯಡಿ ಇವರನ್ನು ದೂರು ದಾಖಲು ಮಾಡಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದಿಂದ ದೂರು ಕೊಡುತ್ತಿದ್ದೇವೆ ಎಂದು ಹೇಳಿರುವ ಅವರು, ಈ ಬರಹದ ಕೆಳಗಡೆ ಒಕ್ಕೂಟದ ಅಧ್ಯಕ್ಷರು ಸಿ.ಎಂ. ಶಿವಕುಮಾರ್ ಎಂದು ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ.
ವರ್ತೂರು ಸಂತೋಷ್ ಪ್ರಕರಣವೇನು? : ಅ. 23ರ ರಾತ್ರಿಯೇ ಬೆಂಗಳೂರಿನ ಹೊರವಲಯದಲ್ಲಿರುವ ರಾಮೋಹಳ್ಳಿಯ ಬಳಿ ಹಾಕಲಾಗಿರುವ ಬಿಗ್ ಬಾಸ್ ಸೆಟ್ ನಿಂದಲೇ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಸಂತೋಷ್ ಅವರ ಕೊರಳಲ್ಲಿದ್ದ, ಹುಲಿ ಉಗುರಿನದ್ದು ಎಂದು ಹೇಳಲಾಗಿರುವ ಡಾಲರ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಡಾಲರ್ ನಲ್ಲಿರುವುದು ಹುಲಿಯ ಉಗುರೇ ಅಥವಾ ಅಲ್ಲವೇ ಎಂಬುದನ್ನು ತಿಳಿಯಲು ಲಾಕೆಟನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಇನ್ನು, ವರ್ತೂರು ಸಂತೋಷ್ ಅವರ ಬಂಧನದ ಬಗ್ಗೆ ಸಂತೋಷ್ ಅವರ ತಾಯಿ ಪ್ರತಿಕ್ರಿಯಿಸಿದ್ದು, ಇದೊಂದು ಷಡ್ಯಂತ್ರವಾಗಿದೆ. ನಾವು ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುವವರು. ನಮಗೆ ಹುಲಿ ಉಗುರು ಮತ್ತೇನೂ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪೇಟೆಯಿಂದ ಹಣಕ್ಕೆ ಖರೀದಿಸಿದ ತಂದಿದ್ದಾಗಿ ನನ್ನ ಮಗ (ಸಂತೋಷ್) ಆ ಲಾಕೆಟನ್ನು ನನಗೆ ತೋರಿಸಿದ್ದ. ನಾನು ಅದಕ್ಕೆ ಚಿನ್ನದ ಸರ ಮಾಡಿಸಿಕೊಂಡು ಹಾಕಿಕೋ ಎಂದು ಹೇಳಿದ್ದೆ. ಅದರಂತೆ, ಆತ ಚಿನ್ನದ ಸರವನ್ನು ಮಾಡಿಸಿಕೊಂಡು ಹಾಕಿಕೊಂಡಿದ್ದ. ಇಷ್ಟು ವರ್ಷವಾದ ನಂತರ ಈಗ ಯಾರೋ ದೂರು ನೀಡಿದ್ದಾರೆ. ನನ್ನ ಮನಗ ಏಳ್ಗೆಯನ್ನು ಸಹಿಸಲಾಗದೇ ಇಂಥದ್ದೊಂದು ಷಡ್ಯಂತ್ರವನ್ನು ಮಾಡಲಾಗಿದೆ ಎಂದು ಹೇಳಿದ್ದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…