ಚಿತ್ರ ಮಂಜರಿ

ಹುಲಿ ಉಗುರಿನ ಸುಳಿಯಲ್ಲಿ ನಟ ದರ್ಶನ್, ವಿನಯ್ ಗುರೂಜಿ!

ಬೆಂಗಳೂರು : ಎರಡು ದಿನಗಳ ಹಿಂದಷ್ಟೇ, ಜನಪ್ರಿಯ ರಿಯಾಲಿಟಿ ಶೋ ಆದ ಕನ್ನಡದ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರು ಹುಲಿ ಉಗುರುಳ್ಳ ಡಾಲರ್ – ಚೈನ್ ಅನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದರು. ಆ ವಿಚಾರ ಸುದ್ದಿ ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅ. 24ರಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಈಗ ನಟ ದರ್ಶನ್ ಹಾಗೂ ಜನಪ್ರಿಯ ಧರ್ಮಗುರುವಾದ ವಿನಯ್ ಗುರೂಜಿಯವರು ಇದೇ ರೀತಿಯ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಂಗಳೂರಿನಲ್ಲಿರುವ ಸರ್ವಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸಿ.ಎಂ. ಶಿವಕುಮಾರ್ ನಾಯಕ್ ಅವರು, ಇವರಿಬ್ಬರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸುವುದಾಗಿ ಅ. 23ರಂದೇ ಪ್ರಕಟಿಸಿದ್ದರು. ಸಾಮಾಜಿಕ ಜಾಲತಾಣವೊಂದರಲ್ಲಿ ಅವರು ಹಾಕಿದ್ದ ಪೋಸ್ಟ್ ವೈರಲ್ ಆಗಿತ್ತು.

ಆರೋಪವೇನು.? : ಸಿ.ಎಂ. ಶಿವಕುಮಾರ್ ಅವರು ಹಾಕಿರುವ ಪೋಸ್ಟ್ ನ ಪ್ರಕಾರ, “ನಟ ದರ್ಶನ್ ಅವರು ತಮ್ಮದೊಂದು ಫೋಟೋದಲ್ಲಿ ಚಿನ್ನದ ಚೈನ್ ನಲ್ಲಿ ಹುಲಿಯ ಉಗುರು ಇರುವ ಡಾಲರ್ ಅನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದಾರೆ. ಅತ್ತ, ವಿನಯ್ ಗುರೂಜಿಯವರು ತಮ್ಮ ಭಾವಚಿತ್ರವೊಂದರಲ್ಲಿ ಹುಲಿಯ ಚರ್ಮದ ಮೇಲೆ ಕುಳಿತಿದ್ದಾರೆ.

ಇದು ಕಾನೂನಿನ ಉಲ್ಲಂಘನೆಯಾಗಿದೆ. ಅರಣ್ಯ ಕಾಯ್ದೆಯಡಿ ಇವರನ್ನು ದೂರು ದಾಖಲು ಮಾಡಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದಿಂದ ದೂರು ಕೊಡುತ್ತಿದ್ದೇವೆ ಎಂದು ಹೇಳಿರುವ ಅವರು, ಈ ಬರಹದ ಕೆಳಗಡೆ ಒಕ್ಕೂಟದ ಅಧ್ಯಕ್ಷರು ಸಿ.ಎಂ. ಶಿವಕುಮಾರ್ ಎಂದು ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ.

ವರ್ತೂರು ಸಂತೋಷ್ ಪ್ರಕರಣವೇನು? : ಅ. 23ರ ರಾತ್ರಿಯೇ ಬೆಂಗಳೂರಿನ ಹೊರವಲಯದಲ್ಲಿರುವ ರಾಮೋಹಳ್ಳಿಯ ಬಳಿ ಹಾಕಲಾಗಿರುವ ಬಿಗ್ ಬಾಸ್ ಸೆಟ್ ನಿಂದಲೇ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಸಂತೋಷ್ ಅವರ ಕೊರಳಲ್ಲಿದ್ದ, ಹುಲಿ ಉಗುರಿನದ್ದು ಎಂದು ಹೇಳಲಾಗಿರುವ ಡಾಲರ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಡಾಲರ್ ನಲ್ಲಿರುವುದು ಹುಲಿಯ ಉಗುರೇ ಅಥವಾ ಅಲ್ಲವೇ ಎಂಬುದನ್ನು ತಿಳಿಯಲು ಲಾಕೆಟನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಇನ್ನು, ವರ್ತೂರು ಸಂತೋಷ್ ಅವರ ಬಂಧನದ ಬಗ್ಗೆ ಸಂತೋಷ್ ಅವರ ತಾಯಿ ಪ್ರತಿಕ್ರಿಯಿಸಿದ್ದು, ಇದೊಂದು ಷಡ್ಯಂತ್ರವಾಗಿದೆ. ನಾವು ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುವವರು. ನಮಗೆ ಹುಲಿ ಉಗುರು ಮತ್ತೇನೂ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪೇಟೆಯಿಂದ ಹಣಕ್ಕೆ ಖರೀದಿಸಿದ ತಂದಿದ್ದಾಗಿ ನನ್ನ ಮಗ (ಸಂತೋಷ್) ಆ ಲಾಕೆಟನ್ನು ನನಗೆ ತೋರಿಸಿದ್ದ. ನಾನು ಅದಕ್ಕೆ ಚಿನ್ನದ ಸರ ಮಾಡಿಸಿಕೊಂಡು ಹಾಕಿಕೋ ಎಂದು ಹೇಳಿದ್ದೆ. ಅದರಂತೆ, ಆತ ಚಿನ್ನದ ಸರವನ್ನು ಮಾಡಿಸಿಕೊಂಡು ಹಾಕಿಕೊಂಡಿದ್ದ. ಇಷ್ಟು ವರ್ಷವಾದ ನಂತರ ಈಗ ಯಾರೋ ದೂರು ನೀಡಿದ್ದಾರೆ. ನನ್ನ ಮನಗ ಏಳ್ಗೆಯನ್ನು ಸಹಿಸಲಾಗದೇ ಇಂಥದ್ದೊಂದು ಷಡ್ಯಂತ್ರವನ್ನು ಮಾಡಲಾಗಿದೆ ಎಂದು ಹೇಳಿದ್ದರು.

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

3 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

3 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

8 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

8 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

8 hours ago