ಚಿತ್ರ ಮಂಜರಿ

ಲೋಕ ಚುನಾವಣೆ: ಸಂಸದೆ ಸುಮಲತಾಗೆ ಬೆಂಬಲ ಸೂಚಿಸಿದ ನಟ ದರ್ಶನ್‌!

ದಕ್ಷಿಣ ಕನ್ನಡ: ಕತ್ತಾರು ದೆಕ್ಕಾಡುವಿನ ಕೊರಗಜ್ಜ ಆದಿ ಸ್ಥಳಕ್ಕೆ ನಟ ದರ್ಶನ್‌ ಭಾನುವಾರ (ಮಾ.೧೦) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರ ಅವರು, ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕತ್ತಾರಿಗೆ ಭೇಟಿ ನೀಡಲು ಆಗಿರಲಿಲ್ಲ. ಈ ಕ್ಷೇತ್ರದ ಬಗ್ಗೆ ಹಲವಾರು ಜನರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದರು. ಹಾಗಾಗಿ ಇಲ್ಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದೇನೆ. ಆದರೆ ಇದ್ಯಾವುದಕ್ಕೂ ನಿರ್ದಿಷ್ಟ ಕಾರಣವಿಲ್ಲ ಎಂದು ನಟ ದರ್ಶನ್‌ ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ನಿಮ್ಮ ಬೆಂಬಲವಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಹೆತ್ತ ತಾಯಿಯನ್ನು ಯಾರಾದರೂ ಬಿಟ್ಟು ಕೊಡಲಾಗುತ್ತದೆಯೇ?, ಮೊನ್ನೆವರೆಗೂ ಅವರ ಜೊತೆಯಲ್ಲಿದ್ದೆ ಈಗ ಕೈಬಿಟ್ಟರೇ ಆಗುತ್ತದೆಯೇ, ನಿಮ್ಮ ಮನೆಯಲ್ಲಿ ನಿಮ್ಮ ಅಮ್ಮನನ್ನು ಬಿಟ್ಟು ಬಿಡುತ್ತೀರಾ?, ಅಮ್ಮ ಯಾವತ್ತಿಗೂ ಅಮ್ಮನೇ ಸರ್‌ ಎಂದು ಮಾಧ್ಯಮಗಳ ಪ್ರಶ್ನೆಗೆ ನಟ ದರ್ಶನ್‌ ಉತ್ತರಿಸಿದರು.

ಹಾಸ್ಯ ನಟ ಚಿಕ್ಕಣ್ಣ, ಮಹಾಬಲ ಶೆಟ್ಟಿ, ಪ್ರಶಾಂತ್‌ ಮಾರ್ಲ, ವಿದ್ಯಾಚರಣ್‌ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಪ್ರೀತಂ ಶೆಟ್ಟಿ ನಟ ದರ್ಶನ್‌ ಜೊತೆಯಲ್ಲಿದ್ದರು.

andolanait

Recent Posts

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

23 mins ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

2 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

2 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

4 hours ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

7 hours ago