ಚಿತ್ರ ಮಂಜರಿ

ದರ್ಶನ್‌ ಜತೆಗಿನ ಫೋಟೊ ಹಂಚಿಕೊಂಡ ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ!

ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಆಕೆ ಯಾರು ಎಂಬ ವಿಷಯವನ್ನು ಬಹಿರಂಗಪಡಿಸುವ ಯತ್ನ ಮಾಡಿದ್ದಾರೆ.

ಅಂದಹಾಗೆ ನಿನ್ನೆ ವಿಜಯಲಕ್ಷ್ಮಿ ದರ್ಶನ್‌ ತಮ್ಮ ಪತಿ ಹಾಗೂ ಮಗನ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ʼಕುಟುಂಬವೇ ನನಗೆಲ್ಲʼ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಅತ್ತ ಪವಿತ್ರ ಗೌಡ ದರ್ಶನ್‌ ಜತೆ ತಾನು ಹಾಗೂ ತನ್ನ ಮಗಳು ಕ್ಲಿಕ್ಕಿಸಿಕೊಂಡ ಹಲವಾರು ಫೋಟೊಗಳ ವಿಡಿಯೊವನ್ನು ಹಂಚಿಕೊಂಡು ʼನಮ್ಮ ಸಂಬಂಧಕ್ಕೆ ಹತ್ತು ವರ್ಷಗಳ ಸಂಭ್ರಮ; ಇದು ಶಾಶ್ವತವಾಗಿರಲಿದೆ. ಧನ್ಯವಾದಗಳು ದರ್ಶನ್‌ ಹಾಗೂ ಖುಷಿ ಗೌಡ” ಎಂದು ಬರೆದುಕೊಂಡಿದ್ದರು.

ಹೀಗೆ ವಿಜಯಲಕ್ಷ್ಮಿ ಫೋಟೊಗೆ ಟಾಂಗ್ ಕೊಡುವ ಯತ್ನ ಮಾಡಿದ ಪವಿತ್ರ ಗೌಡಗೆ ದರ್ಶನ್‌ ಪತ್ನಿ ತಿರುಗೇಟು ನೀಡಿದ್ದಾರೆ. ಪವಿತ್ರ ಗೌಡ ಅವರ ಅಸಲಿ ಪತಿ ಯಾರು ಎಂಬುದನ್ನು ಫೋಟೊ ಸಮೇತ ಬಹಿರಂಗಪಡಿಸಿದ್ದಾರೆ. “ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಮತ್ತೊಬ್ಬರ ಗಂಡನ ಫೋಟೊಗಳನ್ನು ಈ ರೀತಿ ಪೋಸ್ಟ್ ಮಾಡುತ್ತಿರಲಿಲ್ಲ. ಈ ಕೆಲಸ ಆಕೆಯ ನೈತಿಕತೆ ಹಾಗೂ ಆದರ್ಶ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಕೂಡ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಆತನಿಗೆ ಹತ್ತಿರವಾಗುತ್ತಾಳೆ. ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಎಂಬುದನ್ನು ಈ ಚಿತ್ರಗಳು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ” ಎಂದು ವಿಜಯಲಕ್ಷ್ಮಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೇ “ಸಾಮಾನ್ಯವಾಗಿ ನಾನು ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ನನ್ನ ಕುಟುಂಬದ ಹಿತದೃಷ್ಟಿಯಿಂದ ಈಗ ಧ್ವನಿ ಎತ್ತುವ ಸಮಯ ಬಂದಿದೆ ಎಂದೆನಿಸುತ್ತದೆ. ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.

andolana

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

30 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

42 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

1 hour ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

1 hour ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

2 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

3 hours ago