ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಆಕೆ ಯಾರು ಎಂಬ ವಿಷಯವನ್ನು ಬಹಿರಂಗಪಡಿಸುವ ಯತ್ನ ಮಾಡಿದ್ದಾರೆ.
ಅಂದಹಾಗೆ ನಿನ್ನೆ ವಿಜಯಲಕ್ಷ್ಮಿ ದರ್ಶನ್ ತಮ್ಮ ಪತಿ ಹಾಗೂ ಮಗನ ಫೋಟೊವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುವ ಮೂಲಕ ʼಕುಟುಂಬವೇ ನನಗೆಲ್ಲʼ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಅತ್ತ ಪವಿತ್ರ ಗೌಡ ದರ್ಶನ್ ಜತೆ ತಾನು ಹಾಗೂ ತನ್ನ ಮಗಳು ಕ್ಲಿಕ್ಕಿಸಿಕೊಂಡ ಹಲವಾರು ಫೋಟೊಗಳ ವಿಡಿಯೊವನ್ನು ಹಂಚಿಕೊಂಡು ʼನಮ್ಮ ಸಂಬಂಧಕ್ಕೆ ಹತ್ತು ವರ್ಷಗಳ ಸಂಭ್ರಮ; ಇದು ಶಾಶ್ವತವಾಗಿರಲಿದೆ. ಧನ್ಯವಾದಗಳು ದರ್ಶನ್ ಹಾಗೂ ಖುಷಿ ಗೌಡ” ಎಂದು ಬರೆದುಕೊಂಡಿದ್ದರು.
ಹೀಗೆ ವಿಜಯಲಕ್ಷ್ಮಿ ಫೋಟೊಗೆ ಟಾಂಗ್ ಕೊಡುವ ಯತ್ನ ಮಾಡಿದ ಪವಿತ್ರ ಗೌಡಗೆ ದರ್ಶನ್ ಪತ್ನಿ ತಿರುಗೇಟು ನೀಡಿದ್ದಾರೆ. ಪವಿತ್ರ ಗೌಡ ಅವರ ಅಸಲಿ ಪತಿ ಯಾರು ಎಂಬುದನ್ನು ಫೋಟೊ ಸಮೇತ ಬಹಿರಂಗಪಡಿಸಿದ್ದಾರೆ. “ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಮತ್ತೊಬ್ಬರ ಗಂಡನ ಫೋಟೊಗಳನ್ನು ಈ ರೀತಿ ಪೋಸ್ಟ್ ಮಾಡುತ್ತಿರಲಿಲ್ಲ. ಈ ಕೆಲಸ ಆಕೆಯ ನೈತಿಕತೆ ಹಾಗೂ ಆದರ್ಶ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಕೂಡ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಆತನಿಗೆ ಹತ್ತಿರವಾಗುತ್ತಾಳೆ. ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಎಂಬುದನ್ನು ಈ ಚಿತ್ರಗಳು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ” ಎಂದು ವಿಜಯಲಕ್ಷ್ಮಿ ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಅಲ್ಲದೇ “ಸಾಮಾನ್ಯವಾಗಿ ನಾನು ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ನನ್ನ ಕುಟುಂಬದ ಹಿತದೃಷ್ಟಿಯಿಂದ ಈಗ ಧ್ವನಿ ಎತ್ತುವ ಸಮಯ ಬಂದಿದೆ ಎಂದೆನಿಸುತ್ತದೆ. ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…