ಚಿತ್ರ ಮಂಜರಿ

ದರ್ಶನ್‌ ಜತೆಗಿನ ಫೋಟೊ ಹಂಚಿಕೊಂಡ ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ!

ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಆಕೆ ಯಾರು ಎಂಬ ವಿಷಯವನ್ನು ಬಹಿರಂಗಪಡಿಸುವ ಯತ್ನ ಮಾಡಿದ್ದಾರೆ.

ಅಂದಹಾಗೆ ನಿನ್ನೆ ವಿಜಯಲಕ್ಷ್ಮಿ ದರ್ಶನ್‌ ತಮ್ಮ ಪತಿ ಹಾಗೂ ಮಗನ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ʼಕುಟುಂಬವೇ ನನಗೆಲ್ಲʼ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಅತ್ತ ಪವಿತ್ರ ಗೌಡ ದರ್ಶನ್‌ ಜತೆ ತಾನು ಹಾಗೂ ತನ್ನ ಮಗಳು ಕ್ಲಿಕ್ಕಿಸಿಕೊಂಡ ಹಲವಾರು ಫೋಟೊಗಳ ವಿಡಿಯೊವನ್ನು ಹಂಚಿಕೊಂಡು ʼನಮ್ಮ ಸಂಬಂಧಕ್ಕೆ ಹತ್ತು ವರ್ಷಗಳ ಸಂಭ್ರಮ; ಇದು ಶಾಶ್ವತವಾಗಿರಲಿದೆ. ಧನ್ಯವಾದಗಳು ದರ್ಶನ್‌ ಹಾಗೂ ಖುಷಿ ಗೌಡ” ಎಂದು ಬರೆದುಕೊಂಡಿದ್ದರು.

ಹೀಗೆ ವಿಜಯಲಕ್ಷ್ಮಿ ಫೋಟೊಗೆ ಟಾಂಗ್ ಕೊಡುವ ಯತ್ನ ಮಾಡಿದ ಪವಿತ್ರ ಗೌಡಗೆ ದರ್ಶನ್‌ ಪತ್ನಿ ತಿರುಗೇಟು ನೀಡಿದ್ದಾರೆ. ಪವಿತ್ರ ಗೌಡ ಅವರ ಅಸಲಿ ಪತಿ ಯಾರು ಎಂಬುದನ್ನು ಫೋಟೊ ಸಮೇತ ಬಹಿರಂಗಪಡಿಸಿದ್ದಾರೆ. “ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಮತ್ತೊಬ್ಬರ ಗಂಡನ ಫೋಟೊಗಳನ್ನು ಈ ರೀತಿ ಪೋಸ್ಟ್ ಮಾಡುತ್ತಿರಲಿಲ್ಲ. ಈ ಕೆಲಸ ಆಕೆಯ ನೈತಿಕತೆ ಹಾಗೂ ಆದರ್ಶ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಕೂಡ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಆತನಿಗೆ ಹತ್ತಿರವಾಗುತ್ತಾಳೆ. ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಎಂಬುದನ್ನು ಈ ಚಿತ್ರಗಳು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ” ಎಂದು ವಿಜಯಲಕ್ಷ್ಮಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೇ “ಸಾಮಾನ್ಯವಾಗಿ ನಾನು ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ನನ್ನ ಕುಟುಂಬದ ಹಿತದೃಷ್ಟಿಯಿಂದ ಈಗ ಧ್ವನಿ ಎತ್ತುವ ಸಮಯ ಬಂದಿದೆ ಎಂದೆನಿಸುತ್ತದೆ. ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.

andolana

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

12 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

12 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

12 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

13 hours ago