ಚಿತ್ರ ಮಂಜರಿ

ತಿಮ್ಮಪ್ಪನಿಗೆ ಮುಡಿಕೊಟ್ಟು ಹರಕೆ ತೀರಿಸಿದ ನಟ ಧನುಷ್

ತಿರುಪತಿ : ಕಾಲಿವುಡ್​ನ ಸ್ಟಾರ್​ ನಟ ಧನುಷ್​ರವರ ಹೊಸ ಲುಕ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದ ನಟ ಉದ್ದ ಕೂದಲು ಹಾಗೂ ಗಡ್ಡವನ್ನು ಬಿಟ್ಟಿದ್ದರು.

ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ನಟನನ್ನು ಕಂಡು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ನಟ ಧನುಷ್​ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದು, ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಕುಟುಂಬ ಸಮೇತರಾಗಿ ತಿಮ್ಮಪ್ಪನ ದರ್ಶನ ಪಡೆದ ನಟ ಧನುಷ್​ಗೆ ಅವರ ಮಕ್ಕಳಾದ ಯಾತ್ರ ಹಾಗೂ ಲಿಂಗ ಸಾಥ್​ ನೀಡಿದ್ದಾರೆ. ಮೊದಲಿಗೆ ಉದ್ದನೆಯ ಕೂದಲು ಹಾಗೂ ದಾಡಿ ಬಿಟ್ಟಿದ್ದನ್ನು ನೋಡಿ ಅಭಿಮಾನಿಗಳು ಇದು ಅವರ ಹೊಸ ಚಿತ್ರಕ್ಕಾಗಿ ತಯಾರಿ ಎಂದು ಹೇಳಿದ್ದರು. ಇದೀಗ ತಿಮ್ಮಪ್ಪನಿಗೆ ಮುಡಿ ಕೊಟ್ಟಿರುವುದನ್ನು ನೋಡಿ ಹರಕೆ ತೀರಿಸಲು ಕೂದಲು ಬಿಟ್ಟಿದ್ದರು ಎಂದು ಅಭಿಮಾನಿಗಳು ಹೇಳಿದ್ದಾರೆ.

ಇತ್ತೀಚೆಗಷ್ಟೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಧನುಷ್ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕ್ಯಾಪ್ಟನ್ ಮಿಲ್ಲರ್ 1930 ರ ಕಾಲಘಟ್ಟದ ಕಥೆಯಾಗಿದೆ. ಈ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

lokesh

Recent Posts

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

35 mins ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

1 hour ago

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

2 hours ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

2 hours ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…

2 hours ago