ಚಿತ್ರ ಮಂಜರಿ

ತಿಮ್ಮಪ್ಪನಿಗೆ ಮುಡಿಕೊಟ್ಟು ಹರಕೆ ತೀರಿಸಿದ ನಟ ಧನುಷ್

ತಿರುಪತಿ : ಕಾಲಿವುಡ್​ನ ಸ್ಟಾರ್​ ನಟ ಧನುಷ್​ರವರ ಹೊಸ ಲುಕ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದ ನಟ ಉದ್ದ ಕೂದಲು ಹಾಗೂ ಗಡ್ಡವನ್ನು ಬಿಟ್ಟಿದ್ದರು.

ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ನಟನನ್ನು ಕಂಡು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ನಟ ಧನುಷ್​ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದು, ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಕುಟುಂಬ ಸಮೇತರಾಗಿ ತಿಮ್ಮಪ್ಪನ ದರ್ಶನ ಪಡೆದ ನಟ ಧನುಷ್​ಗೆ ಅವರ ಮಕ್ಕಳಾದ ಯಾತ್ರ ಹಾಗೂ ಲಿಂಗ ಸಾಥ್​ ನೀಡಿದ್ದಾರೆ. ಮೊದಲಿಗೆ ಉದ್ದನೆಯ ಕೂದಲು ಹಾಗೂ ದಾಡಿ ಬಿಟ್ಟಿದ್ದನ್ನು ನೋಡಿ ಅಭಿಮಾನಿಗಳು ಇದು ಅವರ ಹೊಸ ಚಿತ್ರಕ್ಕಾಗಿ ತಯಾರಿ ಎಂದು ಹೇಳಿದ್ದರು. ಇದೀಗ ತಿಮ್ಮಪ್ಪನಿಗೆ ಮುಡಿ ಕೊಟ್ಟಿರುವುದನ್ನು ನೋಡಿ ಹರಕೆ ತೀರಿಸಲು ಕೂದಲು ಬಿಟ್ಟಿದ್ದರು ಎಂದು ಅಭಿಮಾನಿಗಳು ಹೇಳಿದ್ದಾರೆ.

ಇತ್ತೀಚೆಗಷ್ಟೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಧನುಷ್ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕ್ಯಾಪ್ಟನ್ ಮಿಲ್ಲರ್ 1930 ರ ಕಾಲಘಟ್ಟದ ಕಥೆಯಾಗಿದೆ. ಈ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

lokesh

Recent Posts

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

5 mins ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

10 mins ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

13 mins ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

2 hours ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

2 hours ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

3 hours ago