ಚಿತ್ರ ಮಂಜರಿ

ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

ಮುಂಬೈ: ʼಮಹಾಭಾರತʼದಲ್ಲಿ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಮಿಂಚಿದ್ದ ನಟ ಗುಫಿ ಪೈಂಟಲ್ (79) ಸೋಮವಾರ (ಜೂ.5 ರಂದು) ಮುಂಜಾನೆ ಮುಂಬಯಿಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 9 ಗಂಟೆಯ ಸುಮಾರಿಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ತಿಳಿಸಿದೆ.

ಕಾಸ್ಟಿಂಗ್ ಡೈರೆಕ್ಟರ್‌ ಆಗಿ ಬಣ್ಣದ ಯಾನದ ಹೆಜ್ಜೆಯನ್ನಿಟ್ಟ ಅವರು, ಬಿ ಆರ್ ಚೋಪ್ರಾ ಅವರ ʼಮಹಾಭಾರತʼ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಅಪಾರ ಜನಪ್ರಿಯತೆಯನ್ನು ಪಡೆದುಕೊಂಡರು. 80 ದಶಕದಲ್ಲಿ ದೂರದರ್ಶನ ಪ್ರಸಾರವಾಗುತ್ತಿದ್ದ ಈ ಧಾರಾವಾಹಿಯಲ್ಲಿ ಇವರ ಪಾತ್ರ ಆ ಕಾಲದಲ್ಲಿ ಅಪಾರ ಮಂದಿಯನ್ನು ರಂಜಿಸಿತ್ತು.

ʼರಫೂ ಚಕ್ಕರ್ʼ, ʼದೇಸ್ ಪರ್ದೇಸ್ʼ, ʼದಿಲ್ಲಗಿʼ, ʼಮೈದಾನ್-ಎ-ಜಂಗ್ʼ ʼದಾವಾʼ, ʼಸುಹಾಗ್ʼ ಮುಂತಾದ ಬಾಲಿವುಡ್‌ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕಿರುತೆರೆಯಲ್ಲಿ ಅನೇಕ ಧಾರಾವಾಹಿಗಳಲ್ಲಿ ಅವರು ಮಿಂಚಿದ್ದಾರೆ” ಮುಖ್ಯವಾಗಿ ʼಕಾನೂನ್ʼ, ʼಸೌದಾʼ, ʼಅಕ್ಬರ್ ಬೀರ್ಬಲ್ʼ, ʼಓಂ ನಮಃ ಶಿವಾಯʼ, ʼಮಿಸೆಸ್. ಕೌಶಿಕ್ ಕಿ ಪಾಂಚ್ ಬಹುಯೆನ್ʼ, ʼಕರ್ಣ್ ಸಂಘಿನಿʼ.. ಇತ್ಯಾದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕೊನೆಯ ಬಾರಿ ʼಜೈ ಕನ್ಹಯ್ಯ ಲಾಲ್ ಕಿʼ ಸಿರಿಯಲ್‌ ನಲ್ಲಿ ಕಾಣಿಸಿಕೊಂಡಿದ್ದರು.

ಸೋಮವಾರ ಮಧ್ಯಾಹ್ನ ಅಂಧೇರಿಯಲ್ಲಿ ನಟನ ಅಂತ್ಯಕ್ರಿಯೆ ನೆರವೇರಲಿದೆ.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

13 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

13 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

14 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

15 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

15 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

17 hours ago