ಚಿತ್ರ ಮಂಜರಿ

ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

ಮುಂಬೈ: ʼಮಹಾಭಾರತʼದಲ್ಲಿ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಮಿಂಚಿದ್ದ ನಟ ಗುಫಿ ಪೈಂಟಲ್ (79) ಸೋಮವಾರ (ಜೂ.5 ರಂದು) ಮುಂಜಾನೆ ಮುಂಬಯಿಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 9 ಗಂಟೆಯ ಸುಮಾರಿಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ತಿಳಿಸಿದೆ.

ಕಾಸ್ಟಿಂಗ್ ಡೈರೆಕ್ಟರ್‌ ಆಗಿ ಬಣ್ಣದ ಯಾನದ ಹೆಜ್ಜೆಯನ್ನಿಟ್ಟ ಅವರು, ಬಿ ಆರ್ ಚೋಪ್ರಾ ಅವರ ʼಮಹಾಭಾರತʼ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಅಪಾರ ಜನಪ್ರಿಯತೆಯನ್ನು ಪಡೆದುಕೊಂಡರು. 80 ದಶಕದಲ್ಲಿ ದೂರದರ್ಶನ ಪ್ರಸಾರವಾಗುತ್ತಿದ್ದ ಈ ಧಾರಾವಾಹಿಯಲ್ಲಿ ಇವರ ಪಾತ್ರ ಆ ಕಾಲದಲ್ಲಿ ಅಪಾರ ಮಂದಿಯನ್ನು ರಂಜಿಸಿತ್ತು.

ʼರಫೂ ಚಕ್ಕರ್ʼ, ʼದೇಸ್ ಪರ್ದೇಸ್ʼ, ʼದಿಲ್ಲಗಿʼ, ʼಮೈದಾನ್-ಎ-ಜಂಗ್ʼ ʼದಾವಾʼ, ʼಸುಹಾಗ್ʼ ಮುಂತಾದ ಬಾಲಿವುಡ್‌ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕಿರುತೆರೆಯಲ್ಲಿ ಅನೇಕ ಧಾರಾವಾಹಿಗಳಲ್ಲಿ ಅವರು ಮಿಂಚಿದ್ದಾರೆ” ಮುಖ್ಯವಾಗಿ ʼಕಾನೂನ್ʼ, ʼಸೌದಾʼ, ʼಅಕ್ಬರ್ ಬೀರ್ಬಲ್ʼ, ʼಓಂ ನಮಃ ಶಿವಾಯʼ, ʼಮಿಸೆಸ್. ಕೌಶಿಕ್ ಕಿ ಪಾಂಚ್ ಬಹುಯೆನ್ʼ, ʼಕರ್ಣ್ ಸಂಘಿನಿʼ.. ಇತ್ಯಾದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕೊನೆಯ ಬಾರಿ ʼಜೈ ಕನ್ಹಯ್ಯ ಲಾಲ್ ಕಿʼ ಸಿರಿಯಲ್‌ ನಲ್ಲಿ ಕಾಣಿಸಿಕೊಂಡಿದ್ದರು.

ಸೋಮವಾರ ಮಧ್ಯಾಹ್ನ ಅಂಧೇರಿಯಲ್ಲಿ ನಟನ ಅಂತ್ಯಕ್ರಿಯೆ ನೆರವೇರಲಿದೆ.

andolanait

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

11 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago