ಚಿತ್ರ ಮಂಜರಿ

ರಾಮ ಮಂದಿರ ಉದ್ಘಾಟನೆ ಕುರಿತು ನಟ ಕಮಲ್ ಹಾಸನ್‌ ಪ್ರತಿಕ್ರಿಯೆ

ನವದೆಹಲಿ: ಜನವರಿ ೨೨ ರಂದು ಅಯೋಧ್ಯೆಯಲ್ಲಿ ಉದ್ಘಾಟನೆಯಾದ ಭವ್ಯ ರಾಮಮಂದಿರ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಕಮಲ್‌ ಹಾಸನ್‌, ತಾವು ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ ಉತ್ತರವೇ ನನ್ನದಾಗಿದೆ ಎಂದು ಹೇಳಿದ್ದಾರೆ. ಆಮೂಲಕ ತಮ್ಮ ನಿಲುವನ್ನು ನೇರವಾಗಿ ತಿಳಿಸದೆಯೇ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಮಮಂದಿರ ಉದ್ಘಾಟನೆ ಕುರಿತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಜನರ ಮಚ್ಚುಗೆಗೆ ಪಾತ್ರವಾಗಿತ್ತು. ಇನ್ನು ಭಾರತೀಯ ಕೆಲವು ಸೆಲೆಬ್ರೆಟಿಸ್‌ ಸೇರಿದಂತೆ ಇತರ ನಾಯಕರು ತಮ್ಮ ವಿರೋಧ ನಿಲುವನ್ನು ಸ್ಪಷ್ಟಪಡಿಸಿದ್ದರು.

ಡಿಸೆಂಬರ್ 6, 1992 ರಂದು ಬಾಬ್ರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ತಾವು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿರುವ ಕಮಲ್‌, “ಬಾಬ್ರಿ ಮಸೀದಿ ಧ್ವಂಸಗೊಳಿಸುವ ಹಕ್ಕು ಯಾರಿಗೂ ಇರಲಿಲ್ಲ. ತಂಜಾವೂರು ದೇವಸ್ಥಾನ ಮತ್ತು ವೆಲೆಂಕಣ್ಣಿ ಚರ್ಚ್ ಹೇಗೆ ನನ್ನದೋ ಅದೇ ರೀತಿ ಆ ಕಟ್ಟಡ ಕೂಡ ನನ್ನದು, ಎಂದು ಅವರು ಆಗ ಹೇಳಿದ್ದರು. ಬಾಬ್ರಿ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಕೆಲವೇ ಕೆಲವು ಸೆಲೆಬ್ರಿಟಿಗಳಲ್ಲಿ ಆಗ ಕಮಲ್‌ ಪ್ರಮುಖರಾಗಿದ್ದರು.

2020ರಲ್ಲಿ ಸುಪ್ರೀಂ ಕೋರ್ಟ್ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸಹಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳ ಪ್ರಕರಣವನ್ನು ಖುಲಾಸೆಗೊಳಿಸಿದಾಗ ಕಮಲ್ ಹಾಸನ್ ಮಾಡಿದ್ದ ಟ್ವೀಟ್‌ ಗಮನ ಸೆಳೆದಿತ್ತು. “ಗಟ್ಟಿಯಾದ ಪುರಾವೆ ಮತ್ತು ಬಲವಾದ ವಾದಗಳನ್ನು ಮಂಡಿಸದೇ ಇರುವುದು ಪ್ರಾಸಿಕ್ಯೂಶನ್‌ನ ಬೇಜವಾಬ್ದಾರಿಯಾಗಿದೆಯೇ ಅಥವಾ ಇದೊಂದು ಯೋಜಿತ ಕ್ರಮವೇ? ನ್ಯಾಯಕ್ಕಾಗಿ ಭಾರತೀಯರ ಆಶಾವಾದ ನಿಷ್ಟ್ರಯೋಜಕವಾಗಬಾರದು,” ಎಂದು ಬರೆದುಕೊಂಡಿದ್ದರು.

ಇದೀಗ ರಾಮ ಮಂದಿರ ಉದ್ಘಾಟನೆ ಕುರಿತು ತಮ್ಮ ಸ್ಪಷ್ಟ ನಿಲುವನ್ನು ಸಹಾ ಅವರು ವ್ಯಕ್ತಪಡಿಸಿದ್ದು, ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ ಉತ್ತರವೇ ನನ್ನದಾಗಿದೆ ಎಂದು ನಟ ಕಲಮ್‌ ಹಾಸನ್‌ ಹೇಳಿದ್ದಾರೆ.

andolanait

Recent Posts

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

4 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

7 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

13 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

18 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

21 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

1 hour ago