ಚಿತ್ರ ಮಂಜರಿ

ರಾಮ ಮಂದಿರ ಉದ್ಘಾಟನೆ ಕುರಿತು ನಟ ಕಮಲ್ ಹಾಸನ್‌ ಪ್ರತಿಕ್ರಿಯೆ

ನವದೆಹಲಿ: ಜನವರಿ ೨೨ ರಂದು ಅಯೋಧ್ಯೆಯಲ್ಲಿ ಉದ್ಘಾಟನೆಯಾದ ಭವ್ಯ ರಾಮಮಂದಿರ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಕಮಲ್‌ ಹಾಸನ್‌, ತಾವು ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ ಉತ್ತರವೇ ನನ್ನದಾಗಿದೆ ಎಂದು ಹೇಳಿದ್ದಾರೆ. ಆಮೂಲಕ ತಮ್ಮ ನಿಲುವನ್ನು ನೇರವಾಗಿ ತಿಳಿಸದೆಯೇ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಮಮಂದಿರ ಉದ್ಘಾಟನೆ ಕುರಿತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಜನರ ಮಚ್ಚುಗೆಗೆ ಪಾತ್ರವಾಗಿತ್ತು. ಇನ್ನು ಭಾರತೀಯ ಕೆಲವು ಸೆಲೆಬ್ರೆಟಿಸ್‌ ಸೇರಿದಂತೆ ಇತರ ನಾಯಕರು ತಮ್ಮ ವಿರೋಧ ನಿಲುವನ್ನು ಸ್ಪಷ್ಟಪಡಿಸಿದ್ದರು.

ಡಿಸೆಂಬರ್ 6, 1992 ರಂದು ಬಾಬ್ರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ತಾವು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿರುವ ಕಮಲ್‌, “ಬಾಬ್ರಿ ಮಸೀದಿ ಧ್ವಂಸಗೊಳಿಸುವ ಹಕ್ಕು ಯಾರಿಗೂ ಇರಲಿಲ್ಲ. ತಂಜಾವೂರು ದೇವಸ್ಥಾನ ಮತ್ತು ವೆಲೆಂಕಣ್ಣಿ ಚರ್ಚ್ ಹೇಗೆ ನನ್ನದೋ ಅದೇ ರೀತಿ ಆ ಕಟ್ಟಡ ಕೂಡ ನನ್ನದು, ಎಂದು ಅವರು ಆಗ ಹೇಳಿದ್ದರು. ಬಾಬ್ರಿ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಕೆಲವೇ ಕೆಲವು ಸೆಲೆಬ್ರಿಟಿಗಳಲ್ಲಿ ಆಗ ಕಮಲ್‌ ಪ್ರಮುಖರಾಗಿದ್ದರು.

2020ರಲ್ಲಿ ಸುಪ್ರೀಂ ಕೋರ್ಟ್ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸಹಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳ ಪ್ರಕರಣವನ್ನು ಖುಲಾಸೆಗೊಳಿಸಿದಾಗ ಕಮಲ್ ಹಾಸನ್ ಮಾಡಿದ್ದ ಟ್ವೀಟ್‌ ಗಮನ ಸೆಳೆದಿತ್ತು. “ಗಟ್ಟಿಯಾದ ಪುರಾವೆ ಮತ್ತು ಬಲವಾದ ವಾದಗಳನ್ನು ಮಂಡಿಸದೇ ಇರುವುದು ಪ್ರಾಸಿಕ್ಯೂಶನ್‌ನ ಬೇಜವಾಬ್ದಾರಿಯಾಗಿದೆಯೇ ಅಥವಾ ಇದೊಂದು ಯೋಜಿತ ಕ್ರಮವೇ? ನ್ಯಾಯಕ್ಕಾಗಿ ಭಾರತೀಯರ ಆಶಾವಾದ ನಿಷ್ಟ್ರಯೋಜಕವಾಗಬಾರದು,” ಎಂದು ಬರೆದುಕೊಂಡಿದ್ದರು.

ಇದೀಗ ರಾಮ ಮಂದಿರ ಉದ್ಘಾಟನೆ ಕುರಿತು ತಮ್ಮ ಸ್ಪಷ್ಟ ನಿಲುವನ್ನು ಸಹಾ ಅವರು ವ್ಯಕ್ತಪಡಿಸಿದ್ದು, ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ ಉತ್ತರವೇ ನನ್ನದಾಗಿದೆ ಎಂದು ನಟ ಕಲಮ್‌ ಹಾಸನ್‌ ಹೇಳಿದ್ದಾರೆ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago