ಚಿತ್ರ ಮಂಜರಿ

ರೈಲು ದುರಂತವನ್ನು ತಪ್ಪಿಸಿದ್ದ ಬಾಲಕ ಸಮಯಪ್ರಜ್ಞೆಗೆ ನಟ ಕಿಶೋರ್‌ ಮೆಚ್ಚುಗೆ

ಬೆಂಗಳೂರು : ಬಟ್ಟೆ ನೋಡಿ ಅವರನ್ನು ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ.

ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು ಚಾಲಕನಿಗೆ ಸಿಗ್ನಲ್‌ ಕೊಟ್ಟು ಭಾರೀ ಅವಘಡವನ್ನು ತಪ್ಪಿಸಿದ 12 ರ ಬಾಲಕ ಮುರ್ಸಲಿನ್ ಶೇಖ್ ಹಾಗೂ ಉತ್ತರಪ್ರದೇಶದಲ್ಲಿ ಮುಸ್ಲಿಂ ಬಾಲಕನಿಗೆ ಇತರೆ ಸಹಪಾಠಿಗಳಿಂದ ಹೊಡೆಸಿದ ಶಿಕ್ಷಕಿಯ ವೈರಲ್‌ ವಿಡಿಯೋದ ಸುದ್ದಿಯನ್ನು ಹಂಚಿಕೊಂಡಿರುವ ಕಿಶೋರ್‌, ದ್ವೇಷ ರಾಜಕೀಯಗಳ ಬಗ್ಗೆ ತಮ್ಮ ಆಕ್ಷೇಪ ಎತ್ತಿದ್ದಾರೆ.

“ತನ್ನ ಸ್ಥಾನದ ಗೌರವ ಘನತೆಯ ಅರಿವಿಲ್ಲದೆ, ಬಟ್ಟೆಯಿಂದ ಭವ್ಯಭಾರತದ ಪ್ರಜೆಗಳನ್ನು ವಿಭಜಿಸುವ ನಾಚಿಕೆಗೇಡು ಸಣ್ಣತನ ಬಿಟ್ಟು ರೈಲಿನೊಳಗಿರುವವರು ಯಾವ ಬಟ್ಟೆಯವರು ಎಂದು ಯೋಚಿಸದೆ ಜೀವ ಉಳಿಸಿದ ಈ ಬಾಲಕನಿಂದ ಮಾನವೀಯತೆಯ ಒಂದೆರಡು ಪಾಠ ಕಲಿತೀರೇ?” ಎಂದು ಕಿಶೋರ್‌ ಪ್ರಶ್ನಿಸಿದ್ದಾರೆ.

ಅದೇ ವೇಳೆ, ಉತ್ತರಪ್ರದೇಶದ ಮುಝಫ್ಫರ್‌ ನಗರದ ಘಟನೆಯ ಬಗ್ಗೆಯೂ ಉಲ್ಲೇಖಿಸಿದ ಕಿಶೋರ್‌, “ಈ ಬಾಲಕನಿಗೆ ಶಾಲೆಯ ಮಕ್ಕಳೆಲ್ಲರ ಕೈಯಲ್ಲಿ ಕಪಾಳಕ್ಕೆ ಹೊಡೆಸುವ, ದನ ತಿಂದರೆಂದು ಇವನ ಕೋಮಿನ ಮನುಷ್ಯರನ್ನೇ ಸಜೀವದಹನ ಮಾಡುವ ಧರ್ಮಾಂಧರಾಗುವುದು ಬಿಟ್ಟು ಮನುಷ್ಯರಾದೀರೇ? ಹಳಿತಪ್ಪಿ ಹೊರಟ ನಮ್ಮ ಜೀವನವನ್ನು ಸರಿದಾರಿಗೆ ತಂದೀರೇ?” ಎಂದು ಪ್ರಶ್ನಿಸಿದ್ದಾರೆ.

ಕಿಶೋರ್‌ ಅವರು ಫೇಸ್‌ಬುಕ್‌ನಲ್ಲಿ ಹಾಕಿರುವ ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ.

ರೈಲ್ವೇ ಹಳಿಯ ಮೇಲೆ ನಡೆದು ಹೋಗುತ್ತಿದ್ದ ಬಾಲಕ ಮುರ್ಸಲಿನ್ ಶೇಖ್‌, ಹಾನಿಗೊಳಗಾದ ಹಳಿಯನ್ನು ಗಮನಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ರೈಲು ಬರುವುದನ್ನು ಕಂಡ ಬಾಲಕ, ತನ್ನ ಸಮಯ ಪ್ರಜ್ಞೆಯಿಂದ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾನೆ.

ಗಲಭೆಕೋರರನ್ನು ಅವರ ಉಡುಪಿನಿಂದಲೇ ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶವೊಂದರಲ್ಲಿ ಹೇಳಿದ್ದು ಮುಸ್ಲಿಮರ ಬಗ್ಗೆ ಈ ರೀತಿ ಪರೋಕ್ಷ ಅವಹೇಳನ ಮಾಡಿದ್ದಾರೆ ಎಂದು ಭಾರೀ ಚರ್ಚೆಗೆ ಕಾರಣವಾಗಿತ್ತು.

ರೈಲ್ವೇ ಅಧಿಕಾರಿಗಳು ಸಮಯಪ್ರಜ್ಞೆ ಮೆರೆದ ಬಾಲಕನಿಗೆ ಪ್ರಮಾಣಪತ್ರ ಮತ್ತು ನಗದು ಪುರಸ್ಕಾರವನ್ನು ನೀಡಿ ಗೌರವಿಸಿದ್ದಾರೆ.

andolanait

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

27 mins ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

35 mins ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

39 mins ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

51 mins ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

56 mins ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

1 hour ago