ಚಿತ್ರ ಮಂಜರಿ

ರೈಲು ದುರಂತವನ್ನು ತಪ್ಪಿಸಿದ್ದ ಬಾಲಕ ಸಮಯಪ್ರಜ್ಞೆಗೆ ನಟ ಕಿಶೋರ್‌ ಮೆಚ್ಚುಗೆ

ಬೆಂಗಳೂರು : ಬಟ್ಟೆ ನೋಡಿ ಅವರನ್ನು ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ.

ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು ಚಾಲಕನಿಗೆ ಸಿಗ್ನಲ್‌ ಕೊಟ್ಟು ಭಾರೀ ಅವಘಡವನ್ನು ತಪ್ಪಿಸಿದ 12 ರ ಬಾಲಕ ಮುರ್ಸಲಿನ್ ಶೇಖ್ ಹಾಗೂ ಉತ್ತರಪ್ರದೇಶದಲ್ಲಿ ಮುಸ್ಲಿಂ ಬಾಲಕನಿಗೆ ಇತರೆ ಸಹಪಾಠಿಗಳಿಂದ ಹೊಡೆಸಿದ ಶಿಕ್ಷಕಿಯ ವೈರಲ್‌ ವಿಡಿಯೋದ ಸುದ್ದಿಯನ್ನು ಹಂಚಿಕೊಂಡಿರುವ ಕಿಶೋರ್‌, ದ್ವೇಷ ರಾಜಕೀಯಗಳ ಬಗ್ಗೆ ತಮ್ಮ ಆಕ್ಷೇಪ ಎತ್ತಿದ್ದಾರೆ.

“ತನ್ನ ಸ್ಥಾನದ ಗೌರವ ಘನತೆಯ ಅರಿವಿಲ್ಲದೆ, ಬಟ್ಟೆಯಿಂದ ಭವ್ಯಭಾರತದ ಪ್ರಜೆಗಳನ್ನು ವಿಭಜಿಸುವ ನಾಚಿಕೆಗೇಡು ಸಣ್ಣತನ ಬಿಟ್ಟು ರೈಲಿನೊಳಗಿರುವವರು ಯಾವ ಬಟ್ಟೆಯವರು ಎಂದು ಯೋಚಿಸದೆ ಜೀವ ಉಳಿಸಿದ ಈ ಬಾಲಕನಿಂದ ಮಾನವೀಯತೆಯ ಒಂದೆರಡು ಪಾಠ ಕಲಿತೀರೇ?” ಎಂದು ಕಿಶೋರ್‌ ಪ್ರಶ್ನಿಸಿದ್ದಾರೆ.

ಅದೇ ವೇಳೆ, ಉತ್ತರಪ್ರದೇಶದ ಮುಝಫ್ಫರ್‌ ನಗರದ ಘಟನೆಯ ಬಗ್ಗೆಯೂ ಉಲ್ಲೇಖಿಸಿದ ಕಿಶೋರ್‌, “ಈ ಬಾಲಕನಿಗೆ ಶಾಲೆಯ ಮಕ್ಕಳೆಲ್ಲರ ಕೈಯಲ್ಲಿ ಕಪಾಳಕ್ಕೆ ಹೊಡೆಸುವ, ದನ ತಿಂದರೆಂದು ಇವನ ಕೋಮಿನ ಮನುಷ್ಯರನ್ನೇ ಸಜೀವದಹನ ಮಾಡುವ ಧರ್ಮಾಂಧರಾಗುವುದು ಬಿಟ್ಟು ಮನುಷ್ಯರಾದೀರೇ? ಹಳಿತಪ್ಪಿ ಹೊರಟ ನಮ್ಮ ಜೀವನವನ್ನು ಸರಿದಾರಿಗೆ ತಂದೀರೇ?” ಎಂದು ಪ್ರಶ್ನಿಸಿದ್ದಾರೆ.

ಕಿಶೋರ್‌ ಅವರು ಫೇಸ್‌ಬುಕ್‌ನಲ್ಲಿ ಹಾಕಿರುವ ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ.

ರೈಲ್ವೇ ಹಳಿಯ ಮೇಲೆ ನಡೆದು ಹೋಗುತ್ತಿದ್ದ ಬಾಲಕ ಮುರ್ಸಲಿನ್ ಶೇಖ್‌, ಹಾನಿಗೊಳಗಾದ ಹಳಿಯನ್ನು ಗಮನಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ರೈಲು ಬರುವುದನ್ನು ಕಂಡ ಬಾಲಕ, ತನ್ನ ಸಮಯ ಪ್ರಜ್ಞೆಯಿಂದ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾನೆ.

ಗಲಭೆಕೋರರನ್ನು ಅವರ ಉಡುಪಿನಿಂದಲೇ ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶವೊಂದರಲ್ಲಿ ಹೇಳಿದ್ದು ಮುಸ್ಲಿಮರ ಬಗ್ಗೆ ಈ ರೀತಿ ಪರೋಕ್ಷ ಅವಹೇಳನ ಮಾಡಿದ್ದಾರೆ ಎಂದು ಭಾರೀ ಚರ್ಚೆಗೆ ಕಾರಣವಾಗಿತ್ತು.

ರೈಲ್ವೇ ಅಧಿಕಾರಿಗಳು ಸಮಯಪ್ರಜ್ಞೆ ಮೆರೆದ ಬಾಲಕನಿಗೆ ಪ್ರಮಾಣಪತ್ರ ಮತ್ತು ನಗದು ಪುರಸ್ಕಾರವನ್ನು ನೀಡಿ ಗೌರವಿಸಿದ್ದಾರೆ.

andolanait

Recent Posts

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

25 mins ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

4 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

4 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

4 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

4 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

4 hours ago