ಚಿತ್ರ ಮಂಜರಿ

ರೈಲು ದುರಂತವನ್ನು ತಪ್ಪಿಸಿದ್ದ ಬಾಲಕ ಸಮಯಪ್ರಜ್ಞೆಗೆ ನಟ ಕಿಶೋರ್‌ ಮೆಚ್ಚುಗೆ

ಬೆಂಗಳೂರು : ಬಟ್ಟೆ ನೋಡಿ ಅವರನ್ನು ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ.

ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು ಚಾಲಕನಿಗೆ ಸಿಗ್ನಲ್‌ ಕೊಟ್ಟು ಭಾರೀ ಅವಘಡವನ್ನು ತಪ್ಪಿಸಿದ 12 ರ ಬಾಲಕ ಮುರ್ಸಲಿನ್ ಶೇಖ್ ಹಾಗೂ ಉತ್ತರಪ್ರದೇಶದಲ್ಲಿ ಮುಸ್ಲಿಂ ಬಾಲಕನಿಗೆ ಇತರೆ ಸಹಪಾಠಿಗಳಿಂದ ಹೊಡೆಸಿದ ಶಿಕ್ಷಕಿಯ ವೈರಲ್‌ ವಿಡಿಯೋದ ಸುದ್ದಿಯನ್ನು ಹಂಚಿಕೊಂಡಿರುವ ಕಿಶೋರ್‌, ದ್ವೇಷ ರಾಜಕೀಯಗಳ ಬಗ್ಗೆ ತಮ್ಮ ಆಕ್ಷೇಪ ಎತ್ತಿದ್ದಾರೆ.

“ತನ್ನ ಸ್ಥಾನದ ಗೌರವ ಘನತೆಯ ಅರಿವಿಲ್ಲದೆ, ಬಟ್ಟೆಯಿಂದ ಭವ್ಯಭಾರತದ ಪ್ರಜೆಗಳನ್ನು ವಿಭಜಿಸುವ ನಾಚಿಕೆಗೇಡು ಸಣ್ಣತನ ಬಿಟ್ಟು ರೈಲಿನೊಳಗಿರುವವರು ಯಾವ ಬಟ್ಟೆಯವರು ಎಂದು ಯೋಚಿಸದೆ ಜೀವ ಉಳಿಸಿದ ಈ ಬಾಲಕನಿಂದ ಮಾನವೀಯತೆಯ ಒಂದೆರಡು ಪಾಠ ಕಲಿತೀರೇ?” ಎಂದು ಕಿಶೋರ್‌ ಪ್ರಶ್ನಿಸಿದ್ದಾರೆ.

ಅದೇ ವೇಳೆ, ಉತ್ತರಪ್ರದೇಶದ ಮುಝಫ್ಫರ್‌ ನಗರದ ಘಟನೆಯ ಬಗ್ಗೆಯೂ ಉಲ್ಲೇಖಿಸಿದ ಕಿಶೋರ್‌, “ಈ ಬಾಲಕನಿಗೆ ಶಾಲೆಯ ಮಕ್ಕಳೆಲ್ಲರ ಕೈಯಲ್ಲಿ ಕಪಾಳಕ್ಕೆ ಹೊಡೆಸುವ, ದನ ತಿಂದರೆಂದು ಇವನ ಕೋಮಿನ ಮನುಷ್ಯರನ್ನೇ ಸಜೀವದಹನ ಮಾಡುವ ಧರ್ಮಾಂಧರಾಗುವುದು ಬಿಟ್ಟು ಮನುಷ್ಯರಾದೀರೇ? ಹಳಿತಪ್ಪಿ ಹೊರಟ ನಮ್ಮ ಜೀವನವನ್ನು ಸರಿದಾರಿಗೆ ತಂದೀರೇ?” ಎಂದು ಪ್ರಶ್ನಿಸಿದ್ದಾರೆ.

ಕಿಶೋರ್‌ ಅವರು ಫೇಸ್‌ಬುಕ್‌ನಲ್ಲಿ ಹಾಕಿರುವ ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ.

ರೈಲ್ವೇ ಹಳಿಯ ಮೇಲೆ ನಡೆದು ಹೋಗುತ್ತಿದ್ದ ಬಾಲಕ ಮುರ್ಸಲಿನ್ ಶೇಖ್‌, ಹಾನಿಗೊಳಗಾದ ಹಳಿಯನ್ನು ಗಮನಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ರೈಲು ಬರುವುದನ್ನು ಕಂಡ ಬಾಲಕ, ತನ್ನ ಸಮಯ ಪ್ರಜ್ಞೆಯಿಂದ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾನೆ.

ಗಲಭೆಕೋರರನ್ನು ಅವರ ಉಡುಪಿನಿಂದಲೇ ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶವೊಂದರಲ್ಲಿ ಹೇಳಿದ್ದು ಮುಸ್ಲಿಮರ ಬಗ್ಗೆ ಈ ರೀತಿ ಪರೋಕ್ಷ ಅವಹೇಳನ ಮಾಡಿದ್ದಾರೆ ಎಂದು ಭಾರೀ ಚರ್ಚೆಗೆ ಕಾರಣವಾಗಿತ್ತು.

ರೈಲ್ವೇ ಅಧಿಕಾರಿಗಳು ಸಮಯಪ್ರಜ್ಞೆ ಮೆರೆದ ಬಾಲಕನಿಗೆ ಪ್ರಮಾಣಪತ್ರ ಮತ್ತು ನಗದು ಪುರಸ್ಕಾರವನ್ನು ನೀಡಿ ಗೌರವಿಸಿದ್ದಾರೆ.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

49 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago