ಚಿತ್ರ ಮಂಜರಿ

ನಟ ಕಿಶೋರ್‌ ಅವರ ಪೋಸ್ಟ್‌ ಡಿಲಿಟ್‌ ಮಾಡಿದ ಇನ್ಸ್ಟಾಗ್ರಾಮ್: ಮೋದಿ ಇದ್ದರೆ ಇದೆಲ್ಲವೂ ಸಾಧ್ಯ ಎಂದ ನಟ

ಬೆಂಗಳೂರು : ಇತ್ತೀಚೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಹಂಚಿಕೊಂಡಿದ್ದ ಪೋಸ್ಟ್‌ ಅನ್ನು ಇನ್ಸ್ಟಾಗ್ರಾಮ್ ಅಳಿಸಿ ಹಾಕಿದೆ.

ಇನ್ಸ್ಟಾಗ್ರಾಮಿನ ನೀತಿ, ನಿಯಮಗಳಿಗೆ ಈ ಪೋಸ್ಟ್‌ ವಿರುದ್ಧವಾಗಿದ್ದು, ಇದು “ADULT SEXUAL EXPLOITATION“ ಎಂದು ಇನ್ಸ್ಟಾಗ್ರಾಮ್‌ ಕಾರಣ ಕೊಟ್ಟಿದೆ.

ಈ ಕುರಿತು ಫೇಸ್‌ ಬುಕ್‌ ಬಲ್ಲಿ ಸ್ಕ್ರೀನ್‌ ಶಾಟ್‌ ಹಂಚಿಕೊಂಡಿರುವ ನಟ ಕಿಶೋರ್‌ ಕುಮಾರ್‌, ʼʼಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ (ಮೋದಿಯವರಿದ್ದರೆ ಇದೆಲ್ಲವೂ ಸಾಧ್ಯ) ಎಂದು ಇನ್ಸ್ಟಾಗ್ರಾಮಿನ ಈ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ʼʼಇನ್ಸ್ಟಾಗ್ರಾಮಿನ ಈ ನಿಯಮಗಳು ನನ್ನ ನೊಂದು ಬೆಂದ ಮಣಿಪುರಕ್ಕೆ , ಕಾಶ್ಮೀರಕ್ಕೆ , ಗುಜರಾತಿಗೆ, ನೂಹ್ ಗೆ, ಹಾಥರಸ್ ಗೆ, ಸಿಂಘು ಬಾರ್ಡ್ರರಿಗೆ, ಲಖೀಮ್ ಪುರ್ ಖೀರಿಗೆ , ಧರ್ಮಸ್ಥಳಕ್ಕೆ, ದೇಶದ ಉದ್ದಗಲಕ್ಕೆ ಅನ್ವಯಿಸಿಬಿಟ್ಟಿದ್ದರೆ ಎಷ್ಟು ಚೆಂದʼʼ ಎಂದು ಹೇಳಿದ್ದಾರೆ.

ಮುಂದುವರಿದು, ʼʼಇವರು ಹೇಳುವ “ADULT SEXUAL EXPLOITATION“ ಅನ್ನು ನನ್ನ ದೇಶದ ಮನಃಪಟಲದಿಂದ ನನ್ನ ಪೋಸ್ಟಿನ ಹಾಗೆ ಅಳಿಸಿಬಿಡಲು ಸಾಧ್ಯವಿದ್ದಿದ್ದರೆ ಎಷ್ಟು ಚೆಂದ…ʼʼ ಎಂದು ಕಿಶೋರ್‌ ಕುಮಾರ್‌ ಬರೆದುಕೊಂಡಿದ್ದಾರೆ.

ʼʼಇಲ್ಲಿ ಮೋದಿಯೋ, ಗೋದಿಯೋ ಮುಖ್ಯವೇ ಅಲ್ಲ;

ʼʼನಾನೋ, ನಾನು ಹಾಕುವ ಪೋಸ್ಟೊ, ಮೋದಿಯೋ, ಗೋದಿಯೋ ಮುಖ್ಯವೇ ಅಲ್ಲ . ಈ ದೇಶವನ್ನು , ಕುವೆಂಪು ಗಾಂಧಿ ಅಂಬೇಡ್ಕರ್ ಬುದ್ಧ ಬಸವ ರ ಕನಸಿನ ಸರ್ವ ಸಮಾನತೆಯ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಉಳಿಸಿಕೊಳ್ಳುತ್ತೇವೆಯಾ ಎನ್ನುವುದಷ್ಟೇ ಮುಖ್ಯʼʼ ಎಂದು ನಟ ಕಿಶೋರ್‌ ಹೇಳಿಕೊಂಡಿದ್ದಾರೆ.

ಡಿಲಿಟ್‌ ಆಗಿರುವ ಕಿಶೋರ್‌ ಅವರ ಪೋಸ್ಟ್‌ ನಲ್ಲಿ ಏನಿತ್ತು?

ʼʼಚಂದ್ರನ ದಕ್ಷಿಣ ಧುೃವದ ಮೇಲೆ ಪ್ರಪಂಚದಲ್ಲೇ ಮೊತ್ತ ಮೊದಲ ಬಾರಿಗೆ ಭಾರತದ ಉಪಗ್ರಹ ಅಡಿಯಿರಿಸಿದೆ… ಹೆಮ್ಮೆಯಿದೆ , ಎದೆ ಬೀಗಿದೆ… ಆದರೆ .. ಸಂಭ್ರಮಿಸಲೇ ಎನ್ನುತ್ತಿರುವಂತೆಯೇ ನನ್ನ ಕಣ್ಣ ಮುಂದೆ . ನನ್ನ ದೇಶದ ಕುತಂತ್ರಿ ರಾಜಕಾರಿಣಿಗಳು ನನ್ನ ಮನೆಯ ಹೆಣ್ಣು ಮಕ್ಕಳನ್ನು ಬೀದಿಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಮಾಡುತ್ತಿರುವ ಚಿತ್ರ ಬಂದು ನಿಲ್ಲುತ್ತದೆ … ನನ್ನ ರೈತ ಸಹೋದರರ ಮೇಲೆ ಜೀಪು ಹರಿಸಿ ಕೊಲ್ಲುತ್ತಿರುವ ಚಿತ್ರ… ಹಿಂದೂ ಮುಸ್ಲಿಂ ಮೂಲಭೂತವಾದಿಗಳಿಗೆ ಕುಮ್ಮಕ್ಕು ಕೊಟ್ಟು ದೇಶವನ್ನು ಒಡೆಯುತ್ತಿರುವ ಚಿತ್ರ… ನನ್ನ ಮುಸ್ಲಿಂ ಕ್ರಿಶ್ಚಿಯನ್ ಸಹೋದರ ಸಹೋದರಿಯರ ಮನೆ, ಹೊಟ್ಟೆಪಾಡಿನ ಅಂಗಡಿಗಳನ್ನು ಧರ್ಮಾಂಧ ಬುಲ್ಡೊಜರುಗಳು ಪುಡಿ ಪುಡಿ ಮಾಡುತ್ತಿರುವ ಚಿತ್ರ… ರಾಜಕೀಯ ದಾಳಗಳಾಗಿ ಸಾಯುತ್ತಲೇ ಇರುವ ಕಶ್ಮೀರದ ಜನತೆಯ ಚಿತ್ರ… ಇಂದಿಗೂ ದಲಿತರ, ಆದಿವಾಸಿಗಳ ಮೇಲೆ ಎಸಗುತ್ತಿರುವ ಹೇಸಿಗೆ ದೌರ್ಜನ್ಯದ ಚಿತ್ರ, ದೇಶದ ಯೋಧರನ್ನು ರಾಜಕಾರಿಣಿಗಳೇ ತಯಾರು ಮಾಡಿದ ಸಾವಿನ ಕೂಪಕ್ಕೆ ತಳ್ಳುವ ಚಿತ್ರ …. ಹೀಗೇ ನೂರಾರು. ..ʼʼ

ಇದನ್ನೂ ಓದಿ ಶಿಷ್ಟಾಚಾರ ವಿವಾದ | ನನ್ನನ್ನು ಸ್ವಾಗತಿಸಲು ಬರದಂತೆ ಕರ್ನಾಟಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ: ಪ್ರಧಾನಿ ಮೋದಿ
ʼʼಉಪಗ್ರಹಕ್ಕಿಂತ ಪರದೆಯ ಮೇಲೆ ಹೆಚ್ಚು ರಾರಾಜಿಸಿ ಮೆರೆದ ಪ್ರಧಾನಿಯಂತೆ ನಾನೂ ಕೂಡ ಸ್ವಾರ್ಥಿಯೂ, ಅಸೂಕ್ಷ್ಮಮತಿಯೂ, ಸಂವೇದನಾಹೀನನೂಆಗಬಾರದಿತ್ತೆ… ಸಂಬಳವೂ ಇಲ್ಲದೆ ದುಡಿದ ನನ್ನ ದೇಶದ ವಿಜ್ಞಾನಿಗಳ ಬೆವರ ಫಲವನ್ನು ಸಂಭ್ರಮಿಸಲು…???ʼʼʼ ಎಂದು ನಟ ಕಿಶೋರ್‌ ಡಿಲಿಟ್‌ ಆಗಿರುವ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದರು.

andolanait

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

7 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

7 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

7 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

7 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

8 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

9 hours ago