ಚಿತ್ರ ಮಂಜರಿ

ತ್ರಿಶಾ, ಖುಷ್ಬು ಮತ್ತು ಚಿರಂಜೀವಿ ವಿರುದ್ದ ಮಾನಹಾನಿ ಕೇಸ್‌ ದಾಖಲಿಸಿದ ನಟ ಮನ್ಸೂರ್‌ ಅಲಿ ಖಾನ್‌

ಚೆನ್ನೈ : ನಟಿ ತ್ರಿಶಾ, ಖುಷ್ಬು ಮತ್ತು ನಟ ಚಿರಂಜೀವಿ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ಖ್ಯಾತ ಖಳನಟ ಮನ್ಸೂರ್‌ ಅಲಿ ಖಾನ್‌ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ ಎಂದು livelaw.com ವರದಿ ಮಾಡಿದೆ.

ನಟಿ ತ್ರಿಶಾ ಕೃಷ್ಣನ್, ಖುಷ್ಬು ಸುಂದರ್‌ ಮತ್ತು ನಟ ಚಿರಂಜೀವಿ ಕೊನಿಡೇಲಾ ಅವರು ತಮ್ಮ ವಿರುದ್ಧ ಎಕ್ಸ್‌  ಪೋಸ್ಟ್‌ನಲ್ಲಿ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿರುವ‌ ನಟ ಮನ್ಸೂರ್‌ ಅಲಿ ಖಾನ್‌ ಅವರು ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಕ್ಕೂ ಮುನ್ನಾ ದಳಪತಿ ವಿಜಯ್‌ ನಟನೆಯ, ಲೋಕೆಶ್‌ ಕನಕರಾಜ್‌ ನಿರ್ದೇಶನದ ʼಲಿಯೋʼ ಸಿನಿಯಾ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಯಶಸ್ಸು ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಹ ನಟಿ ತ್ರಿಶಾ ಕುರಿತು ಮನ್ಸೂರ್‌ ಕೆಲವೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ಈ ಹೇಳಿಕೆಗಳು ಮಹಿಳಾ ದ್ವೇಷ ಹಾಗೂ ಅಗೌರವಯುತವಾದದ್ದು ಎಂದು ಸಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು. ನಟಿ ತ್ರಿಶಾ ಸಾಮಾಜಿಕ ಜಾಲತಾಣದಲ್ಲಿ ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ಖಂಡಿಸಿದ್ದರು. ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಕ್ಷಮಾಪಣೆಯನ್ನು ಮನ್ಸೂರ್‌ ಅಲಿ ಖಾನ್‌ ಕೋರಿದ್ದರು.

ಈ ಬಗ್ಗೆ ಚೆನ್ನೈ ಪೊಲೀಸರು ಮನ್ಸೂರ್‌ ಅಲಿ ಖಾನ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ ೩೪೫ಎ ಹಾಗೂ ೫೦೯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಕೋರ್ಟ್‌ ಮೊರೆ ಹೋಗಿದ್ದ ಮನ್ಸೂರ್‌ಗೆ ಪ್ರಕರಣದ ವಿವರಗಳು ಲಭ್ಯವಿಲ್ಲದೇ ಇರುವುದರಿಂದ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಲಿಯೋ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರು ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

41 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago