ಚಿತ್ರ ಮಂಜರಿ

ತ್ರಿಶಾ, ಖುಷ್ಬು ಮತ್ತು ಚಿರಂಜೀವಿ ವಿರುದ್ದ ಮಾನಹಾನಿ ಕೇಸ್‌ ದಾಖಲಿಸಿದ ನಟ ಮನ್ಸೂರ್‌ ಅಲಿ ಖಾನ್‌

ಚೆನ್ನೈ : ನಟಿ ತ್ರಿಶಾ, ಖುಷ್ಬು ಮತ್ತು ನಟ ಚಿರಂಜೀವಿ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ಖ್ಯಾತ ಖಳನಟ ಮನ್ಸೂರ್‌ ಅಲಿ ಖಾನ್‌ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ ಎಂದು livelaw.com ವರದಿ ಮಾಡಿದೆ.

ನಟಿ ತ್ರಿಶಾ ಕೃಷ್ಣನ್, ಖುಷ್ಬು ಸುಂದರ್‌ ಮತ್ತು ನಟ ಚಿರಂಜೀವಿ ಕೊನಿಡೇಲಾ ಅವರು ತಮ್ಮ ವಿರುದ್ಧ ಎಕ್ಸ್‌  ಪೋಸ್ಟ್‌ನಲ್ಲಿ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿರುವ‌ ನಟ ಮನ್ಸೂರ್‌ ಅಲಿ ಖಾನ್‌ ಅವರು ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಕ್ಕೂ ಮುನ್ನಾ ದಳಪತಿ ವಿಜಯ್‌ ನಟನೆಯ, ಲೋಕೆಶ್‌ ಕನಕರಾಜ್‌ ನಿರ್ದೇಶನದ ʼಲಿಯೋʼ ಸಿನಿಯಾ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಯಶಸ್ಸು ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಹ ನಟಿ ತ್ರಿಶಾ ಕುರಿತು ಮನ್ಸೂರ್‌ ಕೆಲವೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ಈ ಹೇಳಿಕೆಗಳು ಮಹಿಳಾ ದ್ವೇಷ ಹಾಗೂ ಅಗೌರವಯುತವಾದದ್ದು ಎಂದು ಸಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು. ನಟಿ ತ್ರಿಶಾ ಸಾಮಾಜಿಕ ಜಾಲತಾಣದಲ್ಲಿ ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ಖಂಡಿಸಿದ್ದರು. ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಕ್ಷಮಾಪಣೆಯನ್ನು ಮನ್ಸೂರ್‌ ಅಲಿ ಖಾನ್‌ ಕೋರಿದ್ದರು.

ಈ ಬಗ್ಗೆ ಚೆನ್ನೈ ಪೊಲೀಸರು ಮನ್ಸೂರ್‌ ಅಲಿ ಖಾನ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ ೩೪೫ಎ ಹಾಗೂ ೫೦೯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಕೋರ್ಟ್‌ ಮೊರೆ ಹೋಗಿದ್ದ ಮನ್ಸೂರ್‌ಗೆ ಪ್ರಕರಣದ ವಿವರಗಳು ಲಭ್ಯವಿಲ್ಲದೇ ಇರುವುದರಿಂದ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಲಿಯೋ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರು ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು.

andolanait

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

11 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

13 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

13 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

13 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

14 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

15 hours ago