ಚಿತ್ರ ಮಂಜರಿ

ತ್ರಿಶಾ, ಖುಷ್ಬು ಮತ್ತು ಚಿರಂಜೀವಿ ವಿರುದ್ದ ಮಾನಹಾನಿ ಕೇಸ್‌ ದಾಖಲಿಸಿದ ನಟ ಮನ್ಸೂರ್‌ ಅಲಿ ಖಾನ್‌

ಚೆನ್ನೈ : ನಟಿ ತ್ರಿಶಾ, ಖುಷ್ಬು ಮತ್ತು ನಟ ಚಿರಂಜೀವಿ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ಖ್ಯಾತ ಖಳನಟ ಮನ್ಸೂರ್‌ ಅಲಿ ಖಾನ್‌ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ ಎಂದು livelaw.com ವರದಿ ಮಾಡಿದೆ.

ನಟಿ ತ್ರಿಶಾ ಕೃಷ್ಣನ್, ಖುಷ್ಬು ಸುಂದರ್‌ ಮತ್ತು ನಟ ಚಿರಂಜೀವಿ ಕೊನಿಡೇಲಾ ಅವರು ತಮ್ಮ ವಿರುದ್ಧ ಎಕ್ಸ್‌  ಪೋಸ್ಟ್‌ನಲ್ಲಿ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿರುವ‌ ನಟ ಮನ್ಸೂರ್‌ ಅಲಿ ಖಾನ್‌ ಅವರು ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಕ್ಕೂ ಮುನ್ನಾ ದಳಪತಿ ವಿಜಯ್‌ ನಟನೆಯ, ಲೋಕೆಶ್‌ ಕನಕರಾಜ್‌ ನಿರ್ದೇಶನದ ʼಲಿಯೋʼ ಸಿನಿಯಾ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಯಶಸ್ಸು ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಹ ನಟಿ ತ್ರಿಶಾ ಕುರಿತು ಮನ್ಸೂರ್‌ ಕೆಲವೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ಈ ಹೇಳಿಕೆಗಳು ಮಹಿಳಾ ದ್ವೇಷ ಹಾಗೂ ಅಗೌರವಯುತವಾದದ್ದು ಎಂದು ಸಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು. ನಟಿ ತ್ರಿಶಾ ಸಾಮಾಜಿಕ ಜಾಲತಾಣದಲ್ಲಿ ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ಖಂಡಿಸಿದ್ದರು. ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಕ್ಷಮಾಪಣೆಯನ್ನು ಮನ್ಸೂರ್‌ ಅಲಿ ಖಾನ್‌ ಕೋರಿದ್ದರು.

ಈ ಬಗ್ಗೆ ಚೆನ್ನೈ ಪೊಲೀಸರು ಮನ್ಸೂರ್‌ ಅಲಿ ಖಾನ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ ೩೪೫ಎ ಹಾಗೂ ೫೦೯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಕೋರ್ಟ್‌ ಮೊರೆ ಹೋಗಿದ್ದ ಮನ್ಸೂರ್‌ಗೆ ಪ್ರಕರಣದ ವಿವರಗಳು ಲಭ್ಯವಿಲ್ಲದೇ ಇರುವುದರಿಂದ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಲಿಯೋ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರು ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

18 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago